July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

ಉಜಿರೆ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆಯು ಇತ್ತೀಚೆಗೆ ಉಜಿರೆಯಲ್ಲಿ ಮಿಲನ್ ಅಧ್ಯಕ್ಷರಾದ ವೀರ್ ಡಾ| ನವೀನ್ ಕುಮಾರ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಜೈನ್ ಮಿಲನ್ ನ ಕಾರ್ಯಕ್ರಮಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸವಿವರವಾಗಿ ಅಧ್ಯಕ್ಷರು ವಿವರಿಸಿ ತಿಳಿಸಿದರು, ವೀರ್ ಭುಜಬಲಿಯವರು ಯಶಸ್ವಿ ಮಾಸಿಕ ಸಭೆ ನಡೆಸುವ ಬಗ್ಗೆ ಸಲಹೆ ನೀಡಿದರು, ಧೀಮಹಿ ಮಹಿಳಾ ಸಮಾಜದ ಅಧ್ಯಕ್ಷೆ ವೀರಾಂಗನ ಶ್ರೀಮತಿ ಡಾಕ್ಟರ್ ರಜತ ಅವರು ಮಾತನಾಡಿ ತಿಂಗಳಿಗೆ ಒಂದು ಸಲ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲು ಇಂತಹ ಸಭೆಗಳಿಂದ ಅವಕಾಶ ದೊರೆಯುತ್ತದೆ ಮತ್ತು ಇದನ್ನು ಎಲ್ಲಾ ಸದಸ್ಯರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಿಲನ್ ನಿರ್ದೇಶಕ ವೀರ್ ಬಿ. ಸೋಮಶೇಖರ ಶೆಟ್ಟಿ ಅವರು ಮಾತನಾಡಿ ಮಿಲನ್ ಸಂಘಟನೆಯ ಮಹತ್ವ ಹಾಗೂ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ಸಂಘಟನೆ ಬಲಗೊಳಿಸುವಲ್ಲಿ ಸದಸ್ಯರ ದಕಾರವನ್ನು ಕೋರಿದರು. ವೇದಿಕೆಯಲ್ಲಿ ವೀರ್ ಮುನಿರಾಜ ಅಜ್ರಿ ಉಪಸ್ಥಿತರಿದ್ದರು.


ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಕಾರ್ಯ ಕ್ರಮ ನಿರ್ವಹಿಸಿದರು, ವೀರ್ ನಿಖಿತ್ ವಂದಿಸಿದರು.

Related posts

ಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!