25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಬೆಂಗಳೂರಿನ ಪ್ರಖ್ಯಾತ ಯೂನಿಮೇಕ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ನಡೆಸಿದರು.

ಫಿಟ್ಟರ್, ಟರ್ನರ್ ವೃತ್ತಿಯ ವಿದ್ಯಾರ್ಥಿಗಳಲ್ಲದೇ ಡಿಪ್ಲೋಮಾ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೂ ಆಯ್ಕೆ ಪ್ರಕ್ರಿಯೆಯನ್ನು ಕಂಪೆನಿಯ ಅಧಿಕಾರಿಗಳಾದ ಉಮೇಶ್, ಶಂಕರ್, ಶ್ರೀಕುಮಾರ್ ಹಾಗೂ ಸುಹಾಸ್ ನಡೆಸಿದರು. ಉಮೇಶ್ ಮತ್ತು ಶಂಕರ್ ರವರು ಕಂಪನಿಯ ಕಾರ್ಯವಿಧಾನಗಳು, ಉತ್ಪನ್ನಗಳು ಮತ್ತು ಸೌಲಭ್ಯಗಳ ವಿವರಗಳನ್ನು ನೀಡಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಕೌಶಲ್ಯತೆಯ ಅವಶ್ಯಕತೆಯನ್ನು ತಿಳಿಸಿ, ಇನ್ನು ಮುಂದಿನ ದಿನಗಳಲ್ಲಿ ತಾಂತ್ರಿಕ ಕೌಶಲ್ಯ ಹೊಂದಿರುವವರಿಗೆ ಬಹಳಷ್ಟು ಪ್ರಾಮುಖ್ಯತೆ ಒದಗಿ ಬರಲಿದ್ದು ವೃತ್ತಿ ಕೌಶಲ್ಯತೆಯನ್ನು ಮೈಗೂಡಿಸುವುದರ ಜೊತೆಗೆ ಉತ್ತಮ ನಡತೆ ಸಂವಹನ ಶಕ್ತಿಯನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.


ಸಂದರ್ಶನದಲ್ಲಿ ಒಟ್ಟು 84 ವಿದ್ಯಾರ್ಥಿಗಳು ಭಾಗವಹಿಸಿದ್ದು, 35 ವಿದ್ಯಾರ್ಥಿಗಳು ಆಯ್ಕೆಯಾದರು.
ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಅತಿಥಿಗಳನ್ನು ಸ್ವಾಗತಿಸಿ, ಪರಿಚಯಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಶ್ರವಣ್ ಕುಮಾರ್ ಮತ್ತು ಕುಶ ಇವರು ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ನಡೆಸುವಲ್ಲಿ ಸಹಕರಿಸಿದರು.

Related posts

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!