23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಬೆಂಗಳೂರಿನ ಪ್ರಖ್ಯಾತ ಯೂನಿಮೇಕ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ನಡೆಸಿದರು.

ಫಿಟ್ಟರ್, ಟರ್ನರ್ ವೃತ್ತಿಯ ವಿದ್ಯಾರ್ಥಿಗಳಲ್ಲದೇ ಡಿಪ್ಲೋಮಾ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೂ ಆಯ್ಕೆ ಪ್ರಕ್ರಿಯೆಯನ್ನು ಕಂಪೆನಿಯ ಅಧಿಕಾರಿಗಳಾದ ಉಮೇಶ್, ಶಂಕರ್, ಶ್ರೀಕುಮಾರ್ ಹಾಗೂ ಸುಹಾಸ್ ನಡೆಸಿದರು. ಉಮೇಶ್ ಮತ್ತು ಶಂಕರ್ ರವರು ಕಂಪನಿಯ ಕಾರ್ಯವಿಧಾನಗಳು, ಉತ್ಪನ್ನಗಳು ಮತ್ತು ಸೌಲಭ್ಯಗಳ ವಿವರಗಳನ್ನು ನೀಡಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಕೌಶಲ್ಯತೆಯ ಅವಶ್ಯಕತೆಯನ್ನು ತಿಳಿಸಿ, ಇನ್ನು ಮುಂದಿನ ದಿನಗಳಲ್ಲಿ ತಾಂತ್ರಿಕ ಕೌಶಲ್ಯ ಹೊಂದಿರುವವರಿಗೆ ಬಹಳಷ್ಟು ಪ್ರಾಮುಖ್ಯತೆ ಒದಗಿ ಬರಲಿದ್ದು ವೃತ್ತಿ ಕೌಶಲ್ಯತೆಯನ್ನು ಮೈಗೂಡಿಸುವುದರ ಜೊತೆಗೆ ಉತ್ತಮ ನಡತೆ ಸಂವಹನ ಶಕ್ತಿಯನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.


ಸಂದರ್ಶನದಲ್ಲಿ ಒಟ್ಟು 84 ವಿದ್ಯಾರ್ಥಿಗಳು ಭಾಗವಹಿಸಿದ್ದು, 35 ವಿದ್ಯಾರ್ಥಿಗಳು ಆಯ್ಕೆಯಾದರು.
ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಅತಿಥಿಗಳನ್ನು ಸ್ವಾಗತಿಸಿ, ಪರಿಚಯಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಶ್ರವಣ್ ಕುಮಾರ್ ಮತ್ತು ಕುಶ ಇವರು ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ನಡೆಸುವಲ್ಲಿ ಸಹಕರಿಸಿದರು.

Related posts

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya
error: Content is protected !!