September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಬೆಂಗಳೂರಿನ ಪ್ರಖ್ಯಾತ ಯೂನಿಮೇಕ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ನಡೆಸಿದರು.

ಫಿಟ್ಟರ್, ಟರ್ನರ್ ವೃತ್ತಿಯ ವಿದ್ಯಾರ್ಥಿಗಳಲ್ಲದೇ ಡಿಪ್ಲೋಮಾ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೂ ಆಯ್ಕೆ ಪ್ರಕ್ರಿಯೆಯನ್ನು ಕಂಪೆನಿಯ ಅಧಿಕಾರಿಗಳಾದ ಉಮೇಶ್, ಶಂಕರ್, ಶ್ರೀಕುಮಾರ್ ಹಾಗೂ ಸುಹಾಸ್ ನಡೆಸಿದರು. ಉಮೇಶ್ ಮತ್ತು ಶಂಕರ್ ರವರು ಕಂಪನಿಯ ಕಾರ್ಯವಿಧಾನಗಳು, ಉತ್ಪನ್ನಗಳು ಮತ್ತು ಸೌಲಭ್ಯಗಳ ವಿವರಗಳನ್ನು ನೀಡಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಕೌಶಲ್ಯತೆಯ ಅವಶ್ಯಕತೆಯನ್ನು ತಿಳಿಸಿ, ಇನ್ನು ಮುಂದಿನ ದಿನಗಳಲ್ಲಿ ತಾಂತ್ರಿಕ ಕೌಶಲ್ಯ ಹೊಂದಿರುವವರಿಗೆ ಬಹಳಷ್ಟು ಪ್ರಾಮುಖ್ಯತೆ ಒದಗಿ ಬರಲಿದ್ದು ವೃತ್ತಿ ಕೌಶಲ್ಯತೆಯನ್ನು ಮೈಗೂಡಿಸುವುದರ ಜೊತೆಗೆ ಉತ್ತಮ ನಡತೆ ಸಂವಹನ ಶಕ್ತಿಯನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.


ಸಂದರ್ಶನದಲ್ಲಿ ಒಟ್ಟು 84 ವಿದ್ಯಾರ್ಥಿಗಳು ಭಾಗವಹಿಸಿದ್ದು, 35 ವಿದ್ಯಾರ್ಥಿಗಳು ಆಯ್ಕೆಯಾದರು.
ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಅತಿಥಿಗಳನ್ನು ಸ್ವಾಗತಿಸಿ, ಪರಿಚಯಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಶ್ರವಣ್ ಕುಮಾರ್ ಮತ್ತು ಕುಶ ಇವರು ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ನಡೆಸುವಲ್ಲಿ ಸಹಕರಿಸಿದರು.

Related posts

ಎಸ್.ಡಿ.ಎಂ ಝೇಂಕಾರ ಸೀಜನ್-6 ಉದ್ಘಾಟನೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಮೇಲಂತಬೆಟ್ಟು : ಲಕ್ಷ್ಮೀಯಮ್ಮ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya
error: Content is protected !!