30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

ಬೆಳ್ತಂಗಡಿ: ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೇ 18 ರಂದು ಸಂಜೆ ಇತ್ತಿಚೇಗಷ್ಟೇ ವಿಧಿವಶರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಬೆಳ್ತಂಗಡಿಯ ಹಳೆಕೋಟೆ ಮನೆಗೆ ಭೇಟಿ ನೀಡಿ ಬಂಗೇರರ ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಕುಟುಂಬಸ್ಥರಿಗೆ ಸಂತ್ವಾನ ಹೇಳಿದರು.


ನನ್ನ ತಂದೆ ಬಂಗಾರಪ್ಪ ಅವರಂತೆ ವಸಂತ ಬಂಗೇರ ಅವರು ಕೂಡಾ ನೇರ ನಡೆನುಡಿಯ ವ್ಯಕ್ತಿಯಾಗಿದ್ದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಿದ್ದರು. ರಾಜಕೀಯ ಕ್ಷೇತ್ರದಲ್ಲಿ ಬಹಳಷ್ಟು ಅನುಭವವನ್ನು ಹೊಂದಿದ್ದರು. ಅವರ ನಿಧನರಾದ ದಿನ ಅನಿವಾರ್ಯ ಕಾರಣಗಳಿಂದ ನನಗೆ ಬರಲು ಸಾಧ್ಯವಾಗಿಲ್ಲ. ನಾವು ಅವರ ಕುಟುಂಬಸ್ಥರ ಜೊತೆ ಸದಾ ಇರುತ್ತೇವೆ ಎಂದು ಸಚಿವರ ಈ ಸಂದರ್ಭದಲ್ಲಿ ತಿಳಿಸಿದರು.


ಈ ಸಂದರ್ಭದಲ್ಲಿ ಎಂಎಲ್‌ಸಿ ಮಂಜುನಾಥ ಭಂಡಾರಿ, ಜಿ.ಪಂ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹೊಸಂಗಡಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಇಳಂತಿಲ ಗ್ರಾ.ಪಂ ಮಾಜಿ ಅಧ್ಯಕ್ಷ ಇಸುಬು ಇಳಂತಿಲ, ನ್ಯಾಯವಾದಿ ಮನೋಹರ ಕುಮಾರ್ ಇಳಂತಿಲ, ಅನೂಪ್ ಬಂಗೇರ ಮದ್ದಡ್ಕ, ಬಂಗೇರರ ಪುತ್ರಿಯರಾದ ಪ್ರೀತಿತ ಬಂಗೇರ, ಬಿನುತ ಬಂಗೇರ, ಅಳಿಯಂದಿರಾದ ಧರ್ಮವಿಜೇತ್ ಮತ್ತು ಸಂಜೀವ್ ಕನೇಕಲ್ ಉಪಸ್ಥಿತರಿದ್ದರು.

Related posts

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!