September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

ಬೆಳ್ತಂಗಡಿ: ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೇ 18 ರಂದು ಸಂಜೆ ಇತ್ತಿಚೇಗಷ್ಟೇ ವಿಧಿವಶರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಬೆಳ್ತಂಗಡಿಯ ಹಳೆಕೋಟೆ ಮನೆಗೆ ಭೇಟಿ ನೀಡಿ ಬಂಗೇರರ ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಕುಟುಂಬಸ್ಥರಿಗೆ ಸಂತ್ವಾನ ಹೇಳಿದರು.


ನನ್ನ ತಂದೆ ಬಂಗಾರಪ್ಪ ಅವರಂತೆ ವಸಂತ ಬಂಗೇರ ಅವರು ಕೂಡಾ ನೇರ ನಡೆನುಡಿಯ ವ್ಯಕ್ತಿಯಾಗಿದ್ದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಿದ್ದರು. ರಾಜಕೀಯ ಕ್ಷೇತ್ರದಲ್ಲಿ ಬಹಳಷ್ಟು ಅನುಭವವನ್ನು ಹೊಂದಿದ್ದರು. ಅವರ ನಿಧನರಾದ ದಿನ ಅನಿವಾರ್ಯ ಕಾರಣಗಳಿಂದ ನನಗೆ ಬರಲು ಸಾಧ್ಯವಾಗಿಲ್ಲ. ನಾವು ಅವರ ಕುಟುಂಬಸ್ಥರ ಜೊತೆ ಸದಾ ಇರುತ್ತೇವೆ ಎಂದು ಸಚಿವರ ಈ ಸಂದರ್ಭದಲ್ಲಿ ತಿಳಿಸಿದರು.


ಈ ಸಂದರ್ಭದಲ್ಲಿ ಎಂಎಲ್‌ಸಿ ಮಂಜುನಾಥ ಭಂಡಾರಿ, ಜಿ.ಪಂ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹೊಸಂಗಡಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಇಳಂತಿಲ ಗ್ರಾ.ಪಂ ಮಾಜಿ ಅಧ್ಯಕ್ಷ ಇಸುಬು ಇಳಂತಿಲ, ನ್ಯಾಯವಾದಿ ಮನೋಹರ ಕುಮಾರ್ ಇಳಂತಿಲ, ಅನೂಪ್ ಬಂಗೇರ ಮದ್ದಡ್ಕ, ಬಂಗೇರರ ಪುತ್ರಿಯರಾದ ಪ್ರೀತಿತ ಬಂಗೇರ, ಬಿನುತ ಬಂಗೇರ, ಅಳಿಯಂದಿರಾದ ಧರ್ಮವಿಜೇತ್ ಮತ್ತು ಸಂಜೀವ್ ಕನೇಕಲ್ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಹೊಸಂಗಡಿ: ಪುಚ್ರ‍್ಲೆಕ್ಕಿ ಮನೆಯ ಶೋಭಾ ನಿಧನ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಹೊಕ್ಕಾಡಿಗೋಳಿ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya
error: Content is protected !!