22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

ಬೆಳ್ತಂಗಡಿ: ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೇ 18 ರಂದು ಸಂಜೆ ಇತ್ತಿಚೇಗಷ್ಟೇ ವಿಧಿವಶರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಬೆಳ್ತಂಗಡಿಯ ಹಳೆಕೋಟೆ ಮನೆಗೆ ಭೇಟಿ ನೀಡಿ ಬಂಗೇರರ ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಕುಟುಂಬಸ್ಥರಿಗೆ ಸಂತ್ವಾನ ಹೇಳಿದರು.


ನನ್ನ ತಂದೆ ಬಂಗಾರಪ್ಪ ಅವರಂತೆ ವಸಂತ ಬಂಗೇರ ಅವರು ಕೂಡಾ ನೇರ ನಡೆನುಡಿಯ ವ್ಯಕ್ತಿಯಾಗಿದ್ದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಿದ್ದರು. ರಾಜಕೀಯ ಕ್ಷೇತ್ರದಲ್ಲಿ ಬಹಳಷ್ಟು ಅನುಭವವನ್ನು ಹೊಂದಿದ್ದರು. ಅವರ ನಿಧನರಾದ ದಿನ ಅನಿವಾರ್ಯ ಕಾರಣಗಳಿಂದ ನನಗೆ ಬರಲು ಸಾಧ್ಯವಾಗಿಲ್ಲ. ನಾವು ಅವರ ಕುಟುಂಬಸ್ಥರ ಜೊತೆ ಸದಾ ಇರುತ್ತೇವೆ ಎಂದು ಸಚಿವರ ಈ ಸಂದರ್ಭದಲ್ಲಿ ತಿಳಿಸಿದರು.


ಈ ಸಂದರ್ಭದಲ್ಲಿ ಎಂಎಲ್‌ಸಿ ಮಂಜುನಾಥ ಭಂಡಾರಿ, ಜಿ.ಪಂ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹೊಸಂಗಡಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಇಳಂತಿಲ ಗ್ರಾ.ಪಂ ಮಾಜಿ ಅಧ್ಯಕ್ಷ ಇಸುಬು ಇಳಂತಿಲ, ನ್ಯಾಯವಾದಿ ಮನೋಹರ ಕುಮಾರ್ ಇಳಂತಿಲ, ಅನೂಪ್ ಬಂಗೇರ ಮದ್ದಡ್ಕ, ಬಂಗೇರರ ಪುತ್ರಿಯರಾದ ಪ್ರೀತಿತ ಬಂಗೇರ, ಬಿನುತ ಬಂಗೇರ, ಅಳಿಯಂದಿರಾದ ಧರ್ಮವಿಜೇತ್ ಮತ್ತು ಸಂಜೀವ್ ಕನೇಕಲ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಕಾಲೇಜು ಕೋರ್ಸುಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya
error: Content is protected !!