July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕಿನ ಹಾಗೂ ಜಿಲ್ಲೆಯ ಕೊನೆಯ ಭಾಗವಾದ ಮಲವಂತಿಗೆ ಗ್ರಾಮದ ಎಳನೀರಿನಲ್ಲಿ ಶನಿವಾರ ಜಿಲ್ಲಾ ಸಾಹಿತ್ಯ ಪರಿಷತ್ ಹಾಗೂ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ ಜರಗಿತು.

ಎಳನೀರಿನಲ್ಲಿ ಪ್ರಪ್ರಥಮ ಬಾರಿಗೆ ಅಲ್ಲಿನ ಸಮುದಾಯ ಭವನದಲ್ಲಿ ನಡೆದ ಸಾಹಿತ್ಯಕ್ಕೆ ಸಂಬಂಧ ಪಟ್ಟ ಈ ಕಾರ್ಯಕ್ರಮವನ್ನು ಉಜಿರೆ ಎಸ್ ಡಿಎಂ ಕಾಲೇಜಿನ ಕಾಲೇಜಿನ ಪ್ರಿನ್ಸಿಪಾಲ್ ಡಾ.ಬಿ.ಎ. ಕುಮಾರ್ ಹೆಗ್ಡೆ ಉದ್ಘಾಟಿಸಿ ಮಾತನಾಡಿ “ಸಾಹಿತ್ಯ, ಸಂಗೀತ, ಕಲೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಸಾಹಿತ್ಯವು ನಮ್ಮ ಬದುಕನ್ನು ಶ್ರೀಮಂತ ಗೊಳಿಸುತ್ತದೆ. ಎಳನೀರಿನಂತಹ ಸುಂದರ ಪರಿಸರದಲ್ಲಿ ಇನ್ನಷ್ಟು ಹೆಚ್ಚಿನ ಸಾಹಿತ್ಯ ಕಾರ್ಯಕ್ರಮಗಳು ನಡೆಯಬೇಕು” ಎಂದು ಹೇಳಿದರು.

ಸಾಹಿತಿ ಮುನಿರಾಜ ರೆಂಜಾಳ ವಿಶೇಷ ಉಪನ್ಯಾಸ ನೀಡಿ “ಸಾಹಿತ್ಯಕ್ಕಾಗಿ ಬದುಕು ಸಮರ್ಪಿಸಿಕೊಂಡವರ ನೆನಪು ಶಾಶ್ವತವಾಗಿರುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಂ‌.ಪಿ. ಶ್ರೀನಾಥ್ ಮಾತನಾಡಿ “ಸಾಹಿತ್ಯ ಎಲ್ಲಾ ಕಡೆ ಪಸರಿಸಿ ಎಲ್ಲರನ್ನು ಮುಟ್ಟಬೇಕು. ಇದಕ್ಕಾಗಿ ಸಾಹಿತ್ಯ ಪರಿಷತ್ ಕೆಲಸ ಮಾಡುತ್ತಿದ್ದು ಜಿಲ್ಲೆಯ ಹಿಂದುಳಿದ ಪ್ರದೇಶಗಳಲ್ಲೂ ಇರುವ ಎಲೆ ಮರೆಯ ಕಾಯಿಗಳನ್ನು ಗುರುತಿಸಿ ಅವರನ್ನು ಮುನ್ನೆಲೆಗೆ ತರುವ ಪ್ರಯತ್ನ ನಡೆಯುತ್ತಿದೆ” ಎಂದರು


ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಮಾಧವ ಎಂ.ಕೆ. ಮಾತನಾಡಿದರು. ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ಉಪನ್ಯಾಸಕ ದಿವ ಕೊಕ್ಕಡ ಉಪಸ್ಥಿತರಿದ್ದರು.
ಸಾಹಿತಿ ವೈ. ಪ್ರೇಮಕುಮಾರ್ ಎಳನೀರು ಹಾಗೂ ಸಮಾಜಸೇವಕ ಕೇಶವ ಫಡಕೆ ದಿಡುಪೆ ಅವರನ್ನು ಸನ್ಮಾನಿಸಲಾಯಿತು.
ಮಲವಂತಿಗೆ ಗ್ರಾಪಂ ಅಧ್ಯಕ್ಷ ಪ್ರಕಾಶ್ ಜೈನ್ ಸ್ವಾಗತಿಸಿದರು. ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಾಮಕೃಷ್ಣ ಭಟ್ ವಂದಿಸಿದರು.
ಅರ್ಚಿತ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya
error: Content is protected !!