September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕಿನ ಹಾಗೂ ಜಿಲ್ಲೆಯ ಕೊನೆಯ ಭಾಗವಾದ ಮಲವಂತಿಗೆ ಗ್ರಾಮದ ಎಳನೀರಿನಲ್ಲಿ ಶನಿವಾರ ಜಿಲ್ಲಾ ಸಾಹಿತ್ಯ ಪರಿಷತ್ ಹಾಗೂ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ ಜರಗಿತು.

ಎಳನೀರಿನಲ್ಲಿ ಪ್ರಪ್ರಥಮ ಬಾರಿಗೆ ಅಲ್ಲಿನ ಸಮುದಾಯ ಭವನದಲ್ಲಿ ನಡೆದ ಸಾಹಿತ್ಯಕ್ಕೆ ಸಂಬಂಧ ಪಟ್ಟ ಈ ಕಾರ್ಯಕ್ರಮವನ್ನು ಉಜಿರೆ ಎಸ್ ಡಿಎಂ ಕಾಲೇಜಿನ ಕಾಲೇಜಿನ ಪ್ರಿನ್ಸಿಪಾಲ್ ಡಾ.ಬಿ.ಎ. ಕುಮಾರ್ ಹೆಗ್ಡೆ ಉದ್ಘಾಟಿಸಿ ಮಾತನಾಡಿ “ಸಾಹಿತ್ಯ, ಸಂಗೀತ, ಕಲೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಸಾಹಿತ್ಯವು ನಮ್ಮ ಬದುಕನ್ನು ಶ್ರೀಮಂತ ಗೊಳಿಸುತ್ತದೆ. ಎಳನೀರಿನಂತಹ ಸುಂದರ ಪರಿಸರದಲ್ಲಿ ಇನ್ನಷ್ಟು ಹೆಚ್ಚಿನ ಸಾಹಿತ್ಯ ಕಾರ್ಯಕ್ರಮಗಳು ನಡೆಯಬೇಕು” ಎಂದು ಹೇಳಿದರು.

ಸಾಹಿತಿ ಮುನಿರಾಜ ರೆಂಜಾಳ ವಿಶೇಷ ಉಪನ್ಯಾಸ ನೀಡಿ “ಸಾಹಿತ್ಯಕ್ಕಾಗಿ ಬದುಕು ಸಮರ್ಪಿಸಿಕೊಂಡವರ ನೆನಪು ಶಾಶ್ವತವಾಗಿರುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಂ‌.ಪಿ. ಶ್ರೀನಾಥ್ ಮಾತನಾಡಿ “ಸಾಹಿತ್ಯ ಎಲ್ಲಾ ಕಡೆ ಪಸರಿಸಿ ಎಲ್ಲರನ್ನು ಮುಟ್ಟಬೇಕು. ಇದಕ್ಕಾಗಿ ಸಾಹಿತ್ಯ ಪರಿಷತ್ ಕೆಲಸ ಮಾಡುತ್ತಿದ್ದು ಜಿಲ್ಲೆಯ ಹಿಂದುಳಿದ ಪ್ರದೇಶಗಳಲ್ಲೂ ಇರುವ ಎಲೆ ಮರೆಯ ಕಾಯಿಗಳನ್ನು ಗುರುತಿಸಿ ಅವರನ್ನು ಮುನ್ನೆಲೆಗೆ ತರುವ ಪ್ರಯತ್ನ ನಡೆಯುತ್ತಿದೆ” ಎಂದರು


ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಮಾಧವ ಎಂ.ಕೆ. ಮಾತನಾಡಿದರು. ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ಉಪನ್ಯಾಸಕ ದಿವ ಕೊಕ್ಕಡ ಉಪಸ್ಥಿತರಿದ್ದರು.
ಸಾಹಿತಿ ವೈ. ಪ್ರೇಮಕುಮಾರ್ ಎಳನೀರು ಹಾಗೂ ಸಮಾಜಸೇವಕ ಕೇಶವ ಫಡಕೆ ದಿಡುಪೆ ಅವರನ್ನು ಸನ್ಮಾನಿಸಲಾಯಿತು.
ಮಲವಂತಿಗೆ ಗ್ರಾಪಂ ಅಧ್ಯಕ್ಷ ಪ್ರಕಾಶ್ ಜೈನ್ ಸ್ವಾಗತಿಸಿದರು. ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಾಮಕೃಷ್ಣ ಭಟ್ ವಂದಿಸಿದರು.
ಅರ್ಚಿತ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

Suddi Udaya
error: Content is protected !!