23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕಿನ ಹಾಗೂ ಜಿಲ್ಲೆಯ ಕೊನೆಯ ಭಾಗವಾದ ಮಲವಂತಿಗೆ ಗ್ರಾಮದ ಎಳನೀರಿನಲ್ಲಿ ಶನಿವಾರ ಜಿಲ್ಲಾ ಸಾಹಿತ್ಯ ಪರಿಷತ್ ಹಾಗೂ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ ಜರಗಿತು.

ಎಳನೀರಿನಲ್ಲಿ ಪ್ರಪ್ರಥಮ ಬಾರಿಗೆ ಅಲ್ಲಿನ ಸಮುದಾಯ ಭವನದಲ್ಲಿ ನಡೆದ ಸಾಹಿತ್ಯಕ್ಕೆ ಸಂಬಂಧ ಪಟ್ಟ ಈ ಕಾರ್ಯಕ್ರಮವನ್ನು ಉಜಿರೆ ಎಸ್ ಡಿಎಂ ಕಾಲೇಜಿನ ಕಾಲೇಜಿನ ಪ್ರಿನ್ಸಿಪಾಲ್ ಡಾ.ಬಿ.ಎ. ಕುಮಾರ್ ಹೆಗ್ಡೆ ಉದ್ಘಾಟಿಸಿ ಮಾತನಾಡಿ “ಸಾಹಿತ್ಯ, ಸಂಗೀತ, ಕಲೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಸಾಹಿತ್ಯವು ನಮ್ಮ ಬದುಕನ್ನು ಶ್ರೀಮಂತ ಗೊಳಿಸುತ್ತದೆ. ಎಳನೀರಿನಂತಹ ಸುಂದರ ಪರಿಸರದಲ್ಲಿ ಇನ್ನಷ್ಟು ಹೆಚ್ಚಿನ ಸಾಹಿತ್ಯ ಕಾರ್ಯಕ್ರಮಗಳು ನಡೆಯಬೇಕು” ಎಂದು ಹೇಳಿದರು.

ಸಾಹಿತಿ ಮುನಿರಾಜ ರೆಂಜಾಳ ವಿಶೇಷ ಉಪನ್ಯಾಸ ನೀಡಿ “ಸಾಹಿತ್ಯಕ್ಕಾಗಿ ಬದುಕು ಸಮರ್ಪಿಸಿಕೊಂಡವರ ನೆನಪು ಶಾಶ್ವತವಾಗಿರುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಂ‌.ಪಿ. ಶ್ರೀನಾಥ್ ಮಾತನಾಡಿ “ಸಾಹಿತ್ಯ ಎಲ್ಲಾ ಕಡೆ ಪಸರಿಸಿ ಎಲ್ಲರನ್ನು ಮುಟ್ಟಬೇಕು. ಇದಕ್ಕಾಗಿ ಸಾಹಿತ್ಯ ಪರಿಷತ್ ಕೆಲಸ ಮಾಡುತ್ತಿದ್ದು ಜಿಲ್ಲೆಯ ಹಿಂದುಳಿದ ಪ್ರದೇಶಗಳಲ್ಲೂ ಇರುವ ಎಲೆ ಮರೆಯ ಕಾಯಿಗಳನ್ನು ಗುರುತಿಸಿ ಅವರನ್ನು ಮುನ್ನೆಲೆಗೆ ತರುವ ಪ್ರಯತ್ನ ನಡೆಯುತ್ತಿದೆ” ಎಂದರು


ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಮಾಧವ ಎಂ.ಕೆ. ಮಾತನಾಡಿದರು. ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ಉಪನ್ಯಾಸಕ ದಿವ ಕೊಕ್ಕಡ ಉಪಸ್ಥಿತರಿದ್ದರು.
ಸಾಹಿತಿ ವೈ. ಪ್ರೇಮಕುಮಾರ್ ಎಳನೀರು ಹಾಗೂ ಸಮಾಜಸೇವಕ ಕೇಶವ ಫಡಕೆ ದಿಡುಪೆ ಅವರನ್ನು ಸನ್ಮಾನಿಸಲಾಯಿತು.
ಮಲವಂತಿಗೆ ಗ್ರಾಪಂ ಅಧ್ಯಕ್ಷ ಪ್ರಕಾಶ್ ಜೈನ್ ಸ್ವಾಗತಿಸಿದರು. ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಾಮಕೃಷ್ಣ ಭಟ್ ವಂದಿಸಿದರು.
ಅರ್ಚಿತ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!