ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

ಗುರುವಾಯನಕೆರೆ: ಐದು ಸಲ ಶಾಸಕರಾಗಿದ್ದ ವಸಂತ ಬಂಗೇರ ಕ್ಲೀನ್ ಹ್ಯಾಂಡ್. ಇದಕ್ಕಿಂತ ದೊಡ್ಡ ವಿಷಯ ಯಾವುದಿದೆ? ಇವರು ಶಾಸಕರಲ್ಲದಿದ್ದಾಗಲೂ ಶಾಸಕರೇ ಆಗಿದ್ದರು! ನ್ಯಾಯನಿಷ್ಠೆ, ಪ್ರಾಮಾಣಿಕ, ನಿಸ್ವಾರ್ಥ ಬಂಗೇರಾ ನಾಗರಿಕ ಸೇವಾ ಟ್ರಸ್ಟ್‌ನ ಕಾನೂನುಬದ್ಧವಾದ, ಪ್ರಜಾಪ್ರಭುತ್ವಕ್ಕೆ ತಕ್ಕುದಾದ ಹೋರಾಟಕ್ಕೆ ಬಲವಾಗಿ ಬೆಂಬಲವಾಗಿ ಇದ್ದರು. ಸಾರ್ವಜನಿಕ ಸೇವೆಗಾಗಿ ತನ್ನ ಭೂಮಿಗಳನ್ನೆಲ್ಲಾ ಕಳಕೊಳ್ಳುತ್ತಾ ಬಂದರೂ ಪಶ್ಚಾತಾಪವಿಲ್ಲದ ಸಾತ್ವಿಕರು. ಸೋಮನಾಥ ನಾಯಕ್‌ರು ಕೋರ್ಟ್‌ಗೆ ಸರೆಂಡರ್ ಆದಾಗ ಒಂದು ಚಾನೆಲ್‌ನ ಸಂದರ್ಶನದಲ್ಲಿ ಅವರು ಹೇಳಿದ್ದು- ಜೈಲಿಗೆ ಹಾಕಬೇಕಾದ್ದು ಸರಕಾರಿ ಅಧಿಕಾರಿಗಳನ್ನು. ಅವರು ಕೊಟ್ಟ ದಾಖಲೆಗಳನ್ನು ನಾಯಕ್‌ರು ಪ್ರಕಟಿಸಿದ್ದು. ಸತ್ಯ ಹೇಳಿದ್ರೆ ಮಾನ ಹೋಗುವುದು ಹೇಗೆ? ಎಂದು ಘರ್ಜಿಸಿದ್ರು. ಎನ್‌ಎಸ್‌ಟಿ ಕಾರ್ಯಕ್ರಮಗಳ ಹೆಚ್ಚಿನ ಸಂದರ್ಭಗಳಲ್ಲಿ ನಾನು ಅವರು ಜತೆಯಲ್ಲಿರುತ್ತಿದ್ದೆವು. ಆದರೆ ಇಂದು ಅವರು ಇಲ್ಲ. ಕೆಚ್ಚೆದೆಯ ಬಂಗೇರಾರಿಗೆ ನೂರು ನಮಸ್ಕಾರ ಎಂದು ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಸಾಹಿತಿ ಲಕ್ಷ್ಮೀಶ ತೋಳ್ಪಾಡಿಯವರು ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಟ್ರಸ್ಟ್ ಕಚೇರಿಯಲ್ಲಿ ನಡೆದ ದಿ| ಕೆ. ವಸಂತ ಬಂಗೇರಾರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿದರು.


ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್‌ರು ಮಾತಾಡುತ್ತಾ ಕುವೆಟ್ಟು ಗ್ರಾಮ ಪಂಚಾಯತ್‌ನಿಂದ ಅವರ ರಾಜಕೀಯ ಜೀವನ ಆರಂಭವಾಗಿಸಿದ ಮತ್ತು ನಂತರದ ಸುದೀರ್ಘ ಸಂಬಂಧಗಳನ್ನು ವಿವರಿಸುತ್ತಾ ಅವರು ನಮ್ಮ ಸಂಸ್ಥೆಯ ಮಾತ್ರವಲ್ಲ ಕುಟುಂಬದ ಸದಸ್ಯರಾಗಿದ್ದರು ಎಂದರು. ಶೋಷಣಾ ಸಾಮ್ರಾಜ್ಯದ ವಿರುದ್ಧ ಹೋರಾಟಕ್ಕೆ ಅವರ ಸಹಕಾರ, ಬೆಂಬಲ ಸ್ಮರಿಸುತ್ತಾ ರಾಜಕೀಯ ಕ್ಷೇತ್ರದಲ್ಲಿ ಇಂತಹ ಭ್ರಷ್ಟಾಚಾರದ ಸೋಂಕು ಇಲ್ಲದ ವ್ಯಕ್ತಿ ಇನ್ನೊಬ್ಬರಿಲ್ಲ. ಸರಕಾರಿ ಅಧಿಕಾರಿಗಳು, ಪೊಲೀಸರು, ಬಂಗೇರಾರಿಗೆ ಹೆದರಿ ನಡುಗುತ್ತಿದ್ದರು. ಅವರು ಅನ್ಯಾಯವನ್ನು ಎಂದೂ ಸಹಿಸಿದವರಲ್ಲ ಎಂದರು.


ದಲಿತರ ಭೂಹಕ್ಕೊತ್ತಾಯ ಸಮಿತಿಯ ಸಂಚಾಲಕ ಎಂ.ಬಿ. ಕರಿಯ, ಹಿಂದು ಹಿತಚಿಂತನ ವೇದಿಕೆಯ ಸಂಚಾಲಕ ಸೋಮಶೇಖರ ದೇವಸ್ಯ, ಟ್ರಸ್ಟಿಗಳಾದ ದಯಾನಂದ ಪೂಜಾರಿ ಮತ್ತು ಸದಾಶಿವ ಹೆಗ್ಡೆ, ಟ್ರಸ್ಟ್ ಉಪಾಧ್ಯಕ್ಷೆ ವಿದ್ಯಾ ಎಸ್. ನಾಯಕ್, ದಲಿತ ಅಭಿವೃದ್ಧಿ ಸಮಿತಿಯ ಸಂಚಾಲಕ ಬಾಬು ಎ., ದಲಿತ ಮುಖಂಡ ಬಾಬಿ ಮಾಲಾಡಿ, ಸುಕೇಶ್ ಕೆ., ಶೀನ ಪಿಲ್ಯ, ಕುರೈಮತ್ ಮತ್ತಿತರು ಬಂಗೇರಾರ ವ್ಯಕ್ತಿತ್ವವನ್ನು ಸ್ವಾನುಭವಗಳೊಂದಿಗೆ ವಿವರಿಸಿ ಶ್ರದ್ಧಾಂಜಲಿ ಅರ್ಪಿಸಿದರು.

Related posts

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya
error: Content is protected !!