23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಇಂದು (ಮೇ 18) ಮಧ್ಯಾಹ್ನದ ಹೊತ್ತು ಕಾಡಾನೆ ಮತ್ತೆ ಕಂಡು ಬಂದಿದೆ.
ಈ ವಾರದಲ್ಲಿ ಇದು ಕಾಡಾನೆ ಕಂಡು ಬಂದಿರುವುದು ನಾಲ್ಕನೇ ಬಾರಿ. ಸೋಮವಾರದಿಂದ ಬುಧವಾರದವರೆಗೆ ಇಲ್ಲಿನ ರಸ್ತೆಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ಅಲ್ಲಲ್ಲಿ ಕಾಡಾನೆ ಹಗಲಲ್ಲಿ ಹಾಗೂ ರಾತ್ರಿ ಹೊತ್ತು ಕಂಡುಬಂದಿತ್ತು. ಬಳಿಕ ಅರಣ್ಯ ಇಲಾಖೆ ಘಾಟಿ ಭಾಗದಲ್ಲಿ ರಾತ್ರಿ ಗಸ್ತು ಕಾರ್ಯಾಚರಣೆ ಆರಂಭಿಸಿದೆ. ಇದರ ನಂತರ ಎರಡು ದಿನ ಕಾಡಾನೆ ಕಂಡು ಬಂದಿರಲಿಲ್ಲ.
ಆದರೆ ಶನಿವಾರ ಮಧ್ಯಾಹ್ನ 8ನೇ ತಿರುವಿನಲ್ಲಿ ಕಾಡಾನೆ ಮತ್ತೆ ಕಂಡುಬಂದಿದೆ. ರಸ್ತೆ ಬದಿ ಆಹಾರ ತಿನ್ನುತ್ತಿದ್ದ ಕಾಡಾನೆ ಬಳಿಕ ಅರ್ಧ ಗಂಟೆ ಹೊತ್ತು ಅಲ್ಲೇ ವಿರಮಿಸಿತ್ತು. ಆನೆ ರಸ್ತೆ ವ್ಯಾಪ್ತಿಯಲ್ಲಿ ಇದ್ದ ಕಾರಣ ಸುಮಾರು ಒಂದು ತಾಸು ಕಾಲ ವಾಹನ ಸವಾರರು ಕಾದು ನಿಂತರು.


ಅರಣ್ಯ ಇಲಾಖೆ ಡಿ ಆರ್ ಎಫ್ ಒ ನಾಗೇಶ್ ಸಿಬ್ಬಂದಿಗಳಾದ ದಿವಾಕರ ಮತ್ತು ಗೋಪಾಲ ಸ್ಥಳಕ್ಕೆ ಭೇಟಿ ನೀಡಿದಾಗ ಆನೆ ಅಲ್ಲಿಂದ ಕಾಡಿನ ಕಡೆಗೆ ಮುಂದುವರೆದಿತ್ತು. ತಂಡವು ಕಾಡಿನ ಒಳಭಾಗದಲ್ಲಿ ಅಲ್ಲಲ್ಲಿ ಪರಿಶೀಲನೆ ನಡೆಸಿತು. ಈ ಹೊತ್ತಿಗೆ ಆನೆ ಅಲ್ಲಿಂದ ಬೇರೆ ಜಾಗಕ್ಕೆ ತನ್ನ ಠಿಕಾಣಿಯನ್ನು ಬದಲಾಯಿಸಿತ್ತು.

Related posts

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ಇಂದಬೆಟ್ಟು: ಮನೆಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು

Suddi Udaya

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya
error: Content is protected !!