25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಇಂದು (ಮೇ 18) ಮಧ್ಯಾಹ್ನದ ಹೊತ್ತು ಕಾಡಾನೆ ಮತ್ತೆ ಕಂಡು ಬಂದಿದೆ.
ಈ ವಾರದಲ್ಲಿ ಇದು ಕಾಡಾನೆ ಕಂಡು ಬಂದಿರುವುದು ನಾಲ್ಕನೇ ಬಾರಿ. ಸೋಮವಾರದಿಂದ ಬುಧವಾರದವರೆಗೆ ಇಲ್ಲಿನ ರಸ್ತೆಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ಅಲ್ಲಲ್ಲಿ ಕಾಡಾನೆ ಹಗಲಲ್ಲಿ ಹಾಗೂ ರಾತ್ರಿ ಹೊತ್ತು ಕಂಡುಬಂದಿತ್ತು. ಬಳಿಕ ಅರಣ್ಯ ಇಲಾಖೆ ಘಾಟಿ ಭಾಗದಲ್ಲಿ ರಾತ್ರಿ ಗಸ್ತು ಕಾರ್ಯಾಚರಣೆ ಆರಂಭಿಸಿದೆ. ಇದರ ನಂತರ ಎರಡು ದಿನ ಕಾಡಾನೆ ಕಂಡು ಬಂದಿರಲಿಲ್ಲ.
ಆದರೆ ಶನಿವಾರ ಮಧ್ಯಾಹ್ನ 8ನೇ ತಿರುವಿನಲ್ಲಿ ಕಾಡಾನೆ ಮತ್ತೆ ಕಂಡುಬಂದಿದೆ. ರಸ್ತೆ ಬದಿ ಆಹಾರ ತಿನ್ನುತ್ತಿದ್ದ ಕಾಡಾನೆ ಬಳಿಕ ಅರ್ಧ ಗಂಟೆ ಹೊತ್ತು ಅಲ್ಲೇ ವಿರಮಿಸಿತ್ತು. ಆನೆ ರಸ್ತೆ ವ್ಯಾಪ್ತಿಯಲ್ಲಿ ಇದ್ದ ಕಾರಣ ಸುಮಾರು ಒಂದು ತಾಸು ಕಾಲ ವಾಹನ ಸವಾರರು ಕಾದು ನಿಂತರು.


ಅರಣ್ಯ ಇಲಾಖೆ ಡಿ ಆರ್ ಎಫ್ ಒ ನಾಗೇಶ್ ಸಿಬ್ಬಂದಿಗಳಾದ ದಿವಾಕರ ಮತ್ತು ಗೋಪಾಲ ಸ್ಥಳಕ್ಕೆ ಭೇಟಿ ನೀಡಿದಾಗ ಆನೆ ಅಲ್ಲಿಂದ ಕಾಡಿನ ಕಡೆಗೆ ಮುಂದುವರೆದಿತ್ತು. ತಂಡವು ಕಾಡಿನ ಒಳಭಾಗದಲ್ಲಿ ಅಲ್ಲಲ್ಲಿ ಪರಿಶೀಲನೆ ನಡೆಸಿತು. ಈ ಹೊತ್ತಿಗೆ ಆನೆ ಅಲ್ಲಿಂದ ಬೇರೆ ಜಾಗಕ್ಕೆ ತನ್ನ ಠಿಕಾಣಿಯನ್ನು ಬದಲಾಯಿಸಿತ್ತು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ :ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!