September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಇಂದು (ಮೇ 18) ಮಧ್ಯಾಹ್ನದ ಹೊತ್ತು ಕಾಡಾನೆ ಮತ್ತೆ ಕಂಡು ಬಂದಿದೆ.
ಈ ವಾರದಲ್ಲಿ ಇದು ಕಾಡಾನೆ ಕಂಡು ಬಂದಿರುವುದು ನಾಲ್ಕನೇ ಬಾರಿ. ಸೋಮವಾರದಿಂದ ಬುಧವಾರದವರೆಗೆ ಇಲ್ಲಿನ ರಸ್ತೆಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ಅಲ್ಲಲ್ಲಿ ಕಾಡಾನೆ ಹಗಲಲ್ಲಿ ಹಾಗೂ ರಾತ್ರಿ ಹೊತ್ತು ಕಂಡುಬಂದಿತ್ತು. ಬಳಿಕ ಅರಣ್ಯ ಇಲಾಖೆ ಘಾಟಿ ಭಾಗದಲ್ಲಿ ರಾತ್ರಿ ಗಸ್ತು ಕಾರ್ಯಾಚರಣೆ ಆರಂಭಿಸಿದೆ. ಇದರ ನಂತರ ಎರಡು ದಿನ ಕಾಡಾನೆ ಕಂಡು ಬಂದಿರಲಿಲ್ಲ.
ಆದರೆ ಶನಿವಾರ ಮಧ್ಯಾಹ್ನ 8ನೇ ತಿರುವಿನಲ್ಲಿ ಕಾಡಾನೆ ಮತ್ತೆ ಕಂಡುಬಂದಿದೆ. ರಸ್ತೆ ಬದಿ ಆಹಾರ ತಿನ್ನುತ್ತಿದ್ದ ಕಾಡಾನೆ ಬಳಿಕ ಅರ್ಧ ಗಂಟೆ ಹೊತ್ತು ಅಲ್ಲೇ ವಿರಮಿಸಿತ್ತು. ಆನೆ ರಸ್ತೆ ವ್ಯಾಪ್ತಿಯಲ್ಲಿ ಇದ್ದ ಕಾರಣ ಸುಮಾರು ಒಂದು ತಾಸು ಕಾಲ ವಾಹನ ಸವಾರರು ಕಾದು ನಿಂತರು.


ಅರಣ್ಯ ಇಲಾಖೆ ಡಿ ಆರ್ ಎಫ್ ಒ ನಾಗೇಶ್ ಸಿಬ್ಬಂದಿಗಳಾದ ದಿವಾಕರ ಮತ್ತು ಗೋಪಾಲ ಸ್ಥಳಕ್ಕೆ ಭೇಟಿ ನೀಡಿದಾಗ ಆನೆ ಅಲ್ಲಿಂದ ಕಾಡಿನ ಕಡೆಗೆ ಮುಂದುವರೆದಿತ್ತು. ತಂಡವು ಕಾಡಿನ ಒಳಭಾಗದಲ್ಲಿ ಅಲ್ಲಲ್ಲಿ ಪರಿಶೀಲನೆ ನಡೆಸಿತು. ಈ ಹೊತ್ತಿಗೆ ಆನೆ ಅಲ್ಲಿಂದ ಬೇರೆ ಜಾಗಕ್ಕೆ ತನ್ನ ಠಿಕಾಣಿಯನ್ನು ಬದಲಾಯಿಸಿತ್ತು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya
error: Content is protected !!