22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಇಂದು (ಮೇ 18) ಮಧ್ಯಾಹ್ನದ ಹೊತ್ತು ಕಾಡಾನೆ ಮತ್ತೆ ಕಂಡು ಬಂದಿದೆ.
ಈ ವಾರದಲ್ಲಿ ಇದು ಕಾಡಾನೆ ಕಂಡು ಬಂದಿರುವುದು ನಾಲ್ಕನೇ ಬಾರಿ. ಸೋಮವಾರದಿಂದ ಬುಧವಾರದವರೆಗೆ ಇಲ್ಲಿನ ರಸ್ತೆಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ಅಲ್ಲಲ್ಲಿ ಕಾಡಾನೆ ಹಗಲಲ್ಲಿ ಹಾಗೂ ರಾತ್ರಿ ಹೊತ್ತು ಕಂಡುಬಂದಿತ್ತು. ಬಳಿಕ ಅರಣ್ಯ ಇಲಾಖೆ ಘಾಟಿ ಭಾಗದಲ್ಲಿ ರಾತ್ರಿ ಗಸ್ತು ಕಾರ್ಯಾಚರಣೆ ಆರಂಭಿಸಿದೆ. ಇದರ ನಂತರ ಎರಡು ದಿನ ಕಾಡಾನೆ ಕಂಡು ಬಂದಿರಲಿಲ್ಲ.
ಆದರೆ ಶನಿವಾರ ಮಧ್ಯಾಹ್ನ 8ನೇ ತಿರುವಿನಲ್ಲಿ ಕಾಡಾನೆ ಮತ್ತೆ ಕಂಡುಬಂದಿದೆ. ರಸ್ತೆ ಬದಿ ಆಹಾರ ತಿನ್ನುತ್ತಿದ್ದ ಕಾಡಾನೆ ಬಳಿಕ ಅರ್ಧ ಗಂಟೆ ಹೊತ್ತು ಅಲ್ಲೇ ವಿರಮಿಸಿತ್ತು. ಆನೆ ರಸ್ತೆ ವ್ಯಾಪ್ತಿಯಲ್ಲಿ ಇದ್ದ ಕಾರಣ ಸುಮಾರು ಒಂದು ತಾಸು ಕಾಲ ವಾಹನ ಸವಾರರು ಕಾದು ನಿಂತರು.


ಅರಣ್ಯ ಇಲಾಖೆ ಡಿ ಆರ್ ಎಫ್ ಒ ನಾಗೇಶ್ ಸಿಬ್ಬಂದಿಗಳಾದ ದಿವಾಕರ ಮತ್ತು ಗೋಪಾಲ ಸ್ಥಳಕ್ಕೆ ಭೇಟಿ ನೀಡಿದಾಗ ಆನೆ ಅಲ್ಲಿಂದ ಕಾಡಿನ ಕಡೆಗೆ ಮುಂದುವರೆದಿತ್ತು. ತಂಡವು ಕಾಡಿನ ಒಳಭಾಗದಲ್ಲಿ ಅಲ್ಲಲ್ಲಿ ಪರಿಶೀಲನೆ ನಡೆಸಿತು. ಈ ಹೊತ್ತಿಗೆ ಆನೆ ಅಲ್ಲಿಂದ ಬೇರೆ ಜಾಗಕ್ಕೆ ತನ್ನ ಠಿಕಾಣಿಯನ್ನು ಬದಲಾಯಿಸಿತ್ತು.

Related posts

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಾರ್ಷಿಕೋತ್ಸವ

Suddi Udaya

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya
error: Content is protected !!