ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರರಿಗೆ ಮೇ 18ರಂದು ರಂದು ನುಡಿ ನಮನ ಕಾರ್ಯಕ್ರಮ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಇವರ ಅಧ್ಯಕ್ಷತೆಯಲ್ಲಿ ಪತ್ರಿಕಾ ಭವನದಲ್ಲಿ ನಡೆಯಿತು.


ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣೇಶ್ ಶಿರ್ಲಾಲ್, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ ಧರ್ಮಸ್ಥಳ, ಜತೆ ಕಾರ್ಯದರ್ಶಿ ಮನೋಹರ ಬಳಂಜ, ಹಿರಿಯ ಸದಸ್ಯರಾದ ಬಿ. ಎಸ್. ಕುಲಾಲ್, ಶ್ರೀನಿವಾಸ ತಂತ್ರಿ, ಪ್ರಸಾದ್ ಶೆಟ್ಟಿ ಮಾಜಿ ಶಾಸಕ ಕೆ. ವಸಂತ ಬಂಗೇರರ ರಾಜಕೀಯ ಜೀವನ, ಸಾಧನೆ, ಅವರು ಬೆಳ್ತಂಗಡಿ ಕ್ಷೇತ್ರಕ್ಕೆ ನೀಡಿದ ಕೊಡುಗೆ, ಪತ್ರಕರ್ತರ ಸಂಘದ ಜೊತೆ ಅವರಿಗಿದ್ದ ಆತ್ಮೀಯತೆ ಮೊದಲಾದ ವಿಷಯಗಳ ಕುರಿತು ಮಾತನಾಡಿ, ನುಡಿ ನಮನ ಸಲ್ಲಿಸಿದರು.

ಸದಸ್ಯರಾದ ಜಾರಪ್ಪ ಪೂಜಾರಿ ಬೆಳಾಲು, ಅರವಿಂದ ಹೆಬ್ಬಾರ್, ಹೃಷಿಕೇಶ್ ಧರ್ಮಸ್ಥಳ, ಅಚುಶ್ರೀ ಬಾಂಗೇರು ಹಾಜರಿದ್ದರು.
ಕಾಯ೯ದಶಿ೯ ಗಣೇಶ್ ಶಿಲಾ೯ಲು ಕಾಯ೯ಕ್ರಮ ನಿರೂಪಿಸಿ, ವಂದಿಸಿದರು.

Leave a Comment

error: Content is protected !!