24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

ಬೆಳ್ತಂಗಡಿ: ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆಯು ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ನ ಸಮರ್ಥ ಸೌಧ, ಭವನ, ಬೆಳ್ತಂಗಡಿ ಇಲ್ಲಿ ಮೇ 18 ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಜೋನ್ ಬ್ಯಾಪಿಸ್ಟ್ ಡಿಸೋಜ ಅವರು ಮಾತಾಡಿ ಪ್ರತೀ ತಿಂಗಳ ಮೂರನೇ ಮಂಗಳವಾರ ನಡೆಯುವ ವಿಕಲಚೇತನರ ಹೊಸ ಗುರುತಿಸುವಿಕೆ ಹಾಗೂ ನವೀಕರಣದ ಶಿಬಿರವನ್ನು ಇನ್ನೂ ಪರಿಣಾಮಕಾರಿಯಾಗಿ ನಡೆಸಲು ಪುನರ್ವಸತಿ ಕಾರ್ಯಕರ್ತರು ಪ್ರತಿ ಮಾಸಿಕ ಕ್ಯಾಂಪ್ ಗಳಲ್ಲಿ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುವ ಬಗ್ಗೆ ವಿವರಣೆ ಹಾಗೂ ಹೊಸ ಪ್ರಕಾರವನ್ನು ತಿಳಿಸಿದರು. ಹಾಗೂ ಪ್ರತಿ ತಿಂಗಳಲ್ಲಿ ನಡೆಸುವ ಶಿಬಿರವು ಇನ್ನೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹಾಗೂ ಎಲ್ಲಾ ರೀತಿಯಲ್ಲಿ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಆಗಲು ಮತ್ತು ಇನ್ನೂ ಪರಿಣಾಮಕಾರಿಯಾಗಿ ಯಶಸ್ವಿ ಆಗಲು ತಾಲೂಕಿನ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ 4 ಗುಂಪುಗಳಾಗಿ ವಿಂಗಡಣೆ ಮಾಡಿದ್ದು ಪ್ರತೀ ಗುಂಪಿನಲ್ಲಿ ಒಬ್ಬರನ್ನು ನಾಯಕನಾಗಿ ಮಾಡಿ ಪ್ರತಿ ತಿಂಗಳ ಶಿಬಿರವು ಬಹಳ ಅಚ್ಚುಕಟ್ಟಾಗಿ ನಡೆಸಲು ಬೇಕಾದ ಸಲಹೆ ಸೂಚನೆಗಳನ್ನು ನೀಡಿದರು. ಮತ್ತು ತಾಲ್ಲೂಕಿನ ಎಲ್ಲಾ ಕಾರ್ಯಕರ್ತರ ಮಾಸಿಕ ವರದಿಯನ್ನು ಪಡೆದರು ಹಾಗೂ ರಾಜ್ಯ ವಿಕಲಚೇತನರ ಇಲಾಖೆಯಿಂದ ಬಂದಿರುವ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ನಗರ ಪುನರ್ವಸತಿ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya
error: Content is protected !!