27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

ಉಜಿರೆ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆಯು ಇತ್ತೀಚೆಗೆ ಉಜಿರೆಯಲ್ಲಿ ಮಿಲನ್ ಅಧ್ಯಕ್ಷರಾದ ವೀರ್ ಡಾ| ನವೀನ್ ಕುಮಾರ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಜೈನ್ ಮಿಲನ್ ನ ಕಾರ್ಯಕ್ರಮಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸವಿವರವಾಗಿ ಅಧ್ಯಕ್ಷರು ವಿವರಿಸಿ ತಿಳಿಸಿದರು, ವೀರ್ ಭುಜಬಲಿಯವರು ಯಶಸ್ವಿ ಮಾಸಿಕ ಸಭೆ ನಡೆಸುವ ಬಗ್ಗೆ ಸಲಹೆ ನೀಡಿದರು, ಧೀಮಹಿ ಮಹಿಳಾ ಸಮಾಜದ ಅಧ್ಯಕ್ಷೆ ವೀರಾಂಗನ ಶ್ರೀಮತಿ ಡಾಕ್ಟರ್ ರಜತ ಅವರು ಮಾತನಾಡಿ ತಿಂಗಳಿಗೆ ಒಂದು ಸಲ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲು ಇಂತಹ ಸಭೆಗಳಿಂದ ಅವಕಾಶ ದೊರೆಯುತ್ತದೆ ಮತ್ತು ಇದನ್ನು ಎಲ್ಲಾ ಸದಸ್ಯರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಿಲನ್ ನಿರ್ದೇಶಕ ವೀರ್ ಬಿ. ಸೋಮಶೇಖರ ಶೆಟ್ಟಿ ಅವರು ಮಾತನಾಡಿ ಮಿಲನ್ ಸಂಘಟನೆಯ ಮಹತ್ವ ಹಾಗೂ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ಸಂಘಟನೆ ಬಲಗೊಳಿಸುವಲ್ಲಿ ಸದಸ್ಯರ ದಕಾರವನ್ನು ಕೋರಿದರು. ವೇದಿಕೆಯಲ್ಲಿ ವೀರ್ ಮುನಿರಾಜ ಅಜ್ರಿ ಉಪಸ್ಥಿತರಿದ್ದರು.


ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಕಾರ್ಯ ಕ್ರಮ ನಿರ್ವಹಿಸಿದರು, ವೀರ್ ನಿಖಿತ್ ವಂದಿಸಿದರು.

Related posts

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya
error: Content is protected !!