25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

ಉಜಿರೆ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆಯು ಇತ್ತೀಚೆಗೆ ಉಜಿರೆಯಲ್ಲಿ ಮಿಲನ್ ಅಧ್ಯಕ್ಷರಾದ ವೀರ್ ಡಾ| ನವೀನ್ ಕುಮಾರ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಜೈನ್ ಮಿಲನ್ ನ ಕಾರ್ಯಕ್ರಮಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸವಿವರವಾಗಿ ಅಧ್ಯಕ್ಷರು ವಿವರಿಸಿ ತಿಳಿಸಿದರು, ವೀರ್ ಭುಜಬಲಿಯವರು ಯಶಸ್ವಿ ಮಾಸಿಕ ಸಭೆ ನಡೆಸುವ ಬಗ್ಗೆ ಸಲಹೆ ನೀಡಿದರು, ಧೀಮಹಿ ಮಹಿಳಾ ಸಮಾಜದ ಅಧ್ಯಕ್ಷೆ ವೀರಾಂಗನ ಶ್ರೀಮತಿ ಡಾಕ್ಟರ್ ರಜತ ಅವರು ಮಾತನಾಡಿ ತಿಂಗಳಿಗೆ ಒಂದು ಸಲ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲು ಇಂತಹ ಸಭೆಗಳಿಂದ ಅವಕಾಶ ದೊರೆಯುತ್ತದೆ ಮತ್ತು ಇದನ್ನು ಎಲ್ಲಾ ಸದಸ್ಯರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಿಲನ್ ನಿರ್ದೇಶಕ ವೀರ್ ಬಿ. ಸೋಮಶೇಖರ ಶೆಟ್ಟಿ ಅವರು ಮಾತನಾಡಿ ಮಿಲನ್ ಸಂಘಟನೆಯ ಮಹತ್ವ ಹಾಗೂ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ಸಂಘಟನೆ ಬಲಗೊಳಿಸುವಲ್ಲಿ ಸದಸ್ಯರ ದಕಾರವನ್ನು ಕೋರಿದರು. ವೇದಿಕೆಯಲ್ಲಿ ವೀರ್ ಮುನಿರಾಜ ಅಜ್ರಿ ಉಪಸ್ಥಿತರಿದ್ದರು.


ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಕಾರ್ಯ ಕ್ರಮ ನಿರ್ವಹಿಸಿದರು, ವೀರ್ ನಿಖಿತ್ ವಂದಿಸಿದರು.

Related posts

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರಿಗೆ ಅಭಿನಯ ಕಥೆಯಲ್ಲಿ ಪ್ರಥಮ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಚಿನ್ನಯ್ಯನಿಗೆ ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು

Suddi Udaya

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya
error: Content is protected !!