23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

ಬೆಳ್ತಂಗಡಿ: ಮೇ 8ರಂದು ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಉತ್ತರಕ್ರಿಯೆ ಮೇ 21ರಂದು ಗುರುವಾಯನಕೆರೆ-ಕುವೆಟ್ಟು ಮಂಜಿಬೆಟ್ಟು, ಎಫ್. ಎಮ್. ಗಾರ್ಡನ್ ನಲ್ಲಿ ನಡೆಯಲಿದ್ದು ಕಾರ್ಯಕ್ರಮ ಪೂರ್ವ ತಯಾರಿ ಬಗ್ಗೆ ಬಂಗೇರರ ಅಭಿಮಾನಿಗಳ ಸಭೆಯು ಮೇ 18ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದ ಸಭಾ ಭವನದಲ್ಲಿ ನಡೆಯಿತು.


ಬಂಗೇರರ ಅಭಿಮಾನಿ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ ಕುಮಾರ ಇಳಂತಿಲ ಕಾರ್ಯಕ್ರಮದ ಬಗ್ಗೆ ತಿಳಿಸಿ ಅಭಿಮಾನಿಗಳು, ಹಿತೈಷಿಗಳು ಭಾಗವಹಿಸಿ ಸಂಪೂರ್ಣ ಸಹಕಾರ ನೀಡಬೇಕು ಎಂದರು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್, ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಪ್ರಧಾನ ಕಾರ್ಯದರ್ಶಿ ನಿತೇಶ್ ಕೋಟ್ಯಾನ್, ಜಿ. ಪ. ಮಾಜಿ ಉಪಾಧ್ಯಕ್ಷ ಧರಣೇ0ದ್ರ ಕುಮಾರ್, ಅಭಿಮಾನಿ ಬಳಗದ ಎನ್. ಲಕ್ಷ್ಮಣ ಗೌಡ ಇಂದಬೆಟ್ಟು, ಬಂಗೇರರ ಪುತ್ರಿಯರಾದ ಪ್ರೀತೀತಾ ವಿಜೇತ್, ಬಿನುತಾ ಬಂಗೇರ, ಅಳಿಯ ಧರ್ಮವಿಜೇತ್, ಕೆ. ವಸಂತ ಬಂಗೇರ ಅಭಿಮಾನಿಗಳು, ಹಿತೈಷಿಗಳು ಹಾಜರಿದ್ದರು.

Related posts

ಕರ್ನಾಟಕ ದಲಿತ ಚಳುವಳಿಗೆ 50ರ ಸಂಭ್ರಮ: ಎ.28 ಬೆಳ್ತಂಗಡಿಯಲ್ಲಿ 50 ರ ಸಂಭ್ರಮ ಸಮಾವೇಶ- ದಲಿತ ಸಾಂಸ್ಕೃತಿಕ ವೈವಿಧ್ಯ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

Suddi Udaya

ರೈತರ ನೂತನ ಕೋವಿ ಪರವಾನಿಗೆ ಪುನರಾರಂಭಿಸಿ: ಮೋಹನ್ ಗೌಡ ಕಲ್ಮಂಜ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

Suddi Udaya
error: Content is protected !!