22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಬೆಂಗಳೂರಿನ ಪ್ರಖ್ಯಾತ ಯೂನಿಮೇಕ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ನಡೆಸಿದರು.

ಫಿಟ್ಟರ್, ಟರ್ನರ್ ವೃತ್ತಿಯ ವಿದ್ಯಾರ್ಥಿಗಳಲ್ಲದೇ ಡಿಪ್ಲೋಮಾ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೂ ಆಯ್ಕೆ ಪ್ರಕ್ರಿಯೆಯನ್ನು ಕಂಪೆನಿಯ ಅಧಿಕಾರಿಗಳಾದ ಉಮೇಶ್, ಶಂಕರ್, ಶ್ರೀಕುಮಾರ್ ಹಾಗೂ ಸುಹಾಸ್ ನಡೆಸಿದರು. ಉಮೇಶ್ ಮತ್ತು ಶಂಕರ್ ರವರು ಕಂಪನಿಯ ಕಾರ್ಯವಿಧಾನಗಳು, ಉತ್ಪನ್ನಗಳು ಮತ್ತು ಸೌಲಭ್ಯಗಳ ವಿವರಗಳನ್ನು ನೀಡಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಕೌಶಲ್ಯತೆಯ ಅವಶ್ಯಕತೆಯನ್ನು ತಿಳಿಸಿ, ಇನ್ನು ಮುಂದಿನ ದಿನಗಳಲ್ಲಿ ತಾಂತ್ರಿಕ ಕೌಶಲ್ಯ ಹೊಂದಿರುವವರಿಗೆ ಬಹಳಷ್ಟು ಪ್ರಾಮುಖ್ಯತೆ ಒದಗಿ ಬರಲಿದ್ದು ವೃತ್ತಿ ಕೌಶಲ್ಯತೆಯನ್ನು ಮೈಗೂಡಿಸುವುದರ ಜೊತೆಗೆ ಉತ್ತಮ ನಡತೆ ಸಂವಹನ ಶಕ್ತಿಯನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.


ಸಂದರ್ಶನದಲ್ಲಿ ಒಟ್ಟು 84 ವಿದ್ಯಾರ್ಥಿಗಳು ಭಾಗವಹಿಸಿದ್ದು, 35 ವಿದ್ಯಾರ್ಥಿಗಳು ಆಯ್ಕೆಯಾದರು.
ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಅತಿಥಿಗಳನ್ನು ಸ್ವಾಗತಿಸಿ, ಪರಿಚಯಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಶ್ರವಣ್ ಕುಮಾರ್ ಮತ್ತು ಕುಶ ಇವರು ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ನಡೆಸುವಲ್ಲಿ ಸಹಕರಿಸಿದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya
error: Content is protected !!