23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

ಬೆಳ್ತಂಗಡಿ: ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೇ 18 ರಂದು ಸಂಜೆ ಇತ್ತಿಚೇಗಷ್ಟೇ ವಿಧಿವಶರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಬೆಳ್ತಂಗಡಿಯ ಹಳೆಕೋಟೆ ಮನೆಗೆ ಭೇಟಿ ನೀಡಿ ಬಂಗೇರರ ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಕುಟುಂಬಸ್ಥರಿಗೆ ಸಂತ್ವಾನ ಹೇಳಿದರು.


ನನ್ನ ತಂದೆ ಬಂಗಾರಪ್ಪ ಅವರಂತೆ ವಸಂತ ಬಂಗೇರ ಅವರು ಕೂಡಾ ನೇರ ನಡೆನುಡಿಯ ವ್ಯಕ್ತಿಯಾಗಿದ್ದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಿದ್ದರು. ರಾಜಕೀಯ ಕ್ಷೇತ್ರದಲ್ಲಿ ಬಹಳಷ್ಟು ಅನುಭವವನ್ನು ಹೊಂದಿದ್ದರು. ಅವರ ನಿಧನರಾದ ದಿನ ಅನಿವಾರ್ಯ ಕಾರಣಗಳಿಂದ ನನಗೆ ಬರಲು ಸಾಧ್ಯವಾಗಿಲ್ಲ. ನಾವು ಅವರ ಕುಟುಂಬಸ್ಥರ ಜೊತೆ ಸದಾ ಇರುತ್ತೇವೆ ಎಂದು ಸಚಿವರ ಈ ಸಂದರ್ಭದಲ್ಲಿ ತಿಳಿಸಿದರು.


ಈ ಸಂದರ್ಭದಲ್ಲಿ ಎಂಎಲ್‌ಸಿ ಮಂಜುನಾಥ ಭಂಡಾರಿ, ಜಿ.ಪಂ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹೊಸಂಗಡಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಇಳಂತಿಲ ಗ್ರಾ.ಪಂ ಮಾಜಿ ಅಧ್ಯಕ್ಷ ಇಸುಬು ಇಳಂತಿಲ, ನ್ಯಾಯವಾದಿ ಮನೋಹರ ಕುಮಾರ್ ಇಳಂತಿಲ, ಅನೂಪ್ ಬಂಗೇರ ಮದ್ದಡ್ಕ, ಬಂಗೇರರ ಪುತ್ರಿಯರಾದ ಪ್ರೀತಿತ ಬಂಗೇರ, ಬಿನುತ ಬಂಗೇರ, ಅಳಿಯಂದಿರಾದ ಧರ್ಮವಿಜೇತ್ ಮತ್ತು ಸಂಜೀವ್ ಕನೇಕಲ್ ಉಪಸ್ಥಿತರಿದ್ದರು.

Related posts

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

Suddi Udaya

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya
error: Content is protected !!