ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ನಡೆದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಣಾಧಿಕಾರಿ ವೈಜಣ್ಣನವರು ನರೇಗಾ ಫಲಾನುಭವಿಗಳೊಂದಿಗೆ, ರೈತರೊಂದಿಗೆ ನರೇಗಾ ಯೋಜನೆ ಕುರಿತು ಚರ್ಚಿಸಿ, ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭ ನರೇಗಾ ಯೋಜನೆ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು.

ಈ ವೇಳೆ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ್, ಕಾರ್ಯದರ್ಶಿ ರಮೇಶ್ ಕೆ, ತಾಂತ್ರಿಕ ಸಹಾಯಕ ಅಭಿಯಂತರರು ಶರಣ್ ರೈ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳಾದ ಪ್ರದೀಪ್, ಉಮೇಶ್ ಉಪಸ್ಥಿತರಿದ್ದರು.

Leave a Comment

error: Content is protected !!