24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಇಂದು (ಮೇ 18) ಮಧ್ಯಾಹ್ನದ ಹೊತ್ತು ಕಾಡಾನೆ ಮತ್ತೆ ಕಂಡು ಬಂದಿದೆ.
ಈ ವಾರದಲ್ಲಿ ಇದು ಕಾಡಾನೆ ಕಂಡು ಬಂದಿರುವುದು ನಾಲ್ಕನೇ ಬಾರಿ. ಸೋಮವಾರದಿಂದ ಬುಧವಾರದವರೆಗೆ ಇಲ್ಲಿನ ರಸ್ತೆಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ಅಲ್ಲಲ್ಲಿ ಕಾಡಾನೆ ಹಗಲಲ್ಲಿ ಹಾಗೂ ರಾತ್ರಿ ಹೊತ್ತು ಕಂಡುಬಂದಿತ್ತು. ಬಳಿಕ ಅರಣ್ಯ ಇಲಾಖೆ ಘಾಟಿ ಭಾಗದಲ್ಲಿ ರಾತ್ರಿ ಗಸ್ತು ಕಾರ್ಯಾಚರಣೆ ಆರಂಭಿಸಿದೆ. ಇದರ ನಂತರ ಎರಡು ದಿನ ಕಾಡಾನೆ ಕಂಡು ಬಂದಿರಲಿಲ್ಲ.
ಆದರೆ ಶನಿವಾರ ಮಧ್ಯಾಹ್ನ 8ನೇ ತಿರುವಿನಲ್ಲಿ ಕಾಡಾನೆ ಮತ್ತೆ ಕಂಡುಬಂದಿದೆ. ರಸ್ತೆ ಬದಿ ಆಹಾರ ತಿನ್ನುತ್ತಿದ್ದ ಕಾಡಾನೆ ಬಳಿಕ ಅರ್ಧ ಗಂಟೆ ಹೊತ್ತು ಅಲ್ಲೇ ವಿರಮಿಸಿತ್ತು. ಆನೆ ರಸ್ತೆ ವ್ಯಾಪ್ತಿಯಲ್ಲಿ ಇದ್ದ ಕಾರಣ ಸುಮಾರು ಒಂದು ತಾಸು ಕಾಲ ವಾಹನ ಸವಾರರು ಕಾದು ನಿಂತರು.


ಅರಣ್ಯ ಇಲಾಖೆ ಡಿ ಆರ್ ಎಫ್ ಒ ನಾಗೇಶ್ ಸಿಬ್ಬಂದಿಗಳಾದ ದಿವಾಕರ ಮತ್ತು ಗೋಪಾಲ ಸ್ಥಳಕ್ಕೆ ಭೇಟಿ ನೀಡಿದಾಗ ಆನೆ ಅಲ್ಲಿಂದ ಕಾಡಿನ ಕಡೆಗೆ ಮುಂದುವರೆದಿತ್ತು. ತಂಡವು ಕಾಡಿನ ಒಳಭಾಗದಲ್ಲಿ ಅಲ್ಲಲ್ಲಿ ಪರಿಶೀಲನೆ ನಡೆಸಿತು. ಈ ಹೊತ್ತಿಗೆ ಆನೆ ಅಲ್ಲಿಂದ ಬೇರೆ ಜಾಗಕ್ಕೆ ತನ್ನ ಠಿಕಾಣಿಯನ್ನು ಬದಲಾಯಿಸಿತ್ತು.

Related posts

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya
error: Content is protected !!