25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಇಂದು (ಮೇ 18) ಮಧ್ಯಾಹ್ನದ ಹೊತ್ತು ಕಾಡಾನೆ ಮತ್ತೆ ಕಂಡು ಬಂದಿದೆ.
ಈ ವಾರದಲ್ಲಿ ಇದು ಕಾಡಾನೆ ಕಂಡು ಬಂದಿರುವುದು ನಾಲ್ಕನೇ ಬಾರಿ. ಸೋಮವಾರದಿಂದ ಬುಧವಾರದವರೆಗೆ ಇಲ್ಲಿನ ರಸ್ತೆಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ಅಲ್ಲಲ್ಲಿ ಕಾಡಾನೆ ಹಗಲಲ್ಲಿ ಹಾಗೂ ರಾತ್ರಿ ಹೊತ್ತು ಕಂಡುಬಂದಿತ್ತು. ಬಳಿಕ ಅರಣ್ಯ ಇಲಾಖೆ ಘಾಟಿ ಭಾಗದಲ್ಲಿ ರಾತ್ರಿ ಗಸ್ತು ಕಾರ್ಯಾಚರಣೆ ಆರಂಭಿಸಿದೆ. ಇದರ ನಂತರ ಎರಡು ದಿನ ಕಾಡಾನೆ ಕಂಡು ಬಂದಿರಲಿಲ್ಲ.
ಆದರೆ ಶನಿವಾರ ಮಧ್ಯಾಹ್ನ 8ನೇ ತಿರುವಿನಲ್ಲಿ ಕಾಡಾನೆ ಮತ್ತೆ ಕಂಡುಬಂದಿದೆ. ರಸ್ತೆ ಬದಿ ಆಹಾರ ತಿನ್ನುತ್ತಿದ್ದ ಕಾಡಾನೆ ಬಳಿಕ ಅರ್ಧ ಗಂಟೆ ಹೊತ್ತು ಅಲ್ಲೇ ವಿರಮಿಸಿತ್ತು. ಆನೆ ರಸ್ತೆ ವ್ಯಾಪ್ತಿಯಲ್ಲಿ ಇದ್ದ ಕಾರಣ ಸುಮಾರು ಒಂದು ತಾಸು ಕಾಲ ವಾಹನ ಸವಾರರು ಕಾದು ನಿಂತರು.


ಅರಣ್ಯ ಇಲಾಖೆ ಡಿ ಆರ್ ಎಫ್ ಒ ನಾಗೇಶ್ ಸಿಬ್ಬಂದಿಗಳಾದ ದಿವಾಕರ ಮತ್ತು ಗೋಪಾಲ ಸ್ಥಳಕ್ಕೆ ಭೇಟಿ ನೀಡಿದಾಗ ಆನೆ ಅಲ್ಲಿಂದ ಕಾಡಿನ ಕಡೆಗೆ ಮುಂದುವರೆದಿತ್ತು. ತಂಡವು ಕಾಡಿನ ಒಳಭಾಗದಲ್ಲಿ ಅಲ್ಲಲ್ಲಿ ಪರಿಶೀಲನೆ ನಡೆಸಿತು. ಈ ಹೊತ್ತಿಗೆ ಆನೆ ಅಲ್ಲಿಂದ ಬೇರೆ ಜಾಗಕ್ಕೆ ತನ್ನ ಠಿಕಾಣಿಯನ್ನು ಬದಲಾಯಿಸಿತ್ತು.

Related posts

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ. ಧ. ಗ್ರಾ. ಯೋಜನೆಯಲ್ಲಿ ಆಯುಧ ಪೂಜೆ

Suddi Udaya
error: Content is protected !!