25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

ಉಜಿರೆ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆಯು ಇತ್ತೀಚೆಗೆ ಉಜಿರೆಯಲ್ಲಿ ಮಿಲನ್ ಅಧ್ಯಕ್ಷರಾದ ವೀರ್ ಡಾ| ನವೀನ್ ಕುಮಾರ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಜೈನ್ ಮಿಲನ್ ನ ಕಾರ್ಯಕ್ರಮಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸವಿವರವಾಗಿ ಅಧ್ಯಕ್ಷರು ವಿವರಿಸಿ ತಿಳಿಸಿದರು, ವೀರ್ ಭುಜಬಲಿಯವರು ಯಶಸ್ವಿ ಮಾಸಿಕ ಸಭೆ ನಡೆಸುವ ಬಗ್ಗೆ ಸಲಹೆ ನೀಡಿದರು, ಧೀಮಹಿ ಮಹಿಳಾ ಸಮಾಜದ ಅಧ್ಯಕ್ಷೆ ವೀರಾಂಗನ ಶ್ರೀಮತಿ ಡಾಕ್ಟರ್ ರಜತ ಅವರು ಮಾತನಾಡಿ ತಿಂಗಳಿಗೆ ಒಂದು ಸಲ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲು ಇಂತಹ ಸಭೆಗಳಿಂದ ಅವಕಾಶ ದೊರೆಯುತ್ತದೆ ಮತ್ತು ಇದನ್ನು ಎಲ್ಲಾ ಸದಸ್ಯರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಿಲನ್ ನಿರ್ದೇಶಕ ವೀರ್ ಬಿ. ಸೋಮಶೇಖರ ಶೆಟ್ಟಿ ಅವರು ಮಾತನಾಡಿ ಮಿಲನ್ ಸಂಘಟನೆಯ ಮಹತ್ವ ಹಾಗೂ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ಸಂಘಟನೆ ಬಲಗೊಳಿಸುವಲ್ಲಿ ಸದಸ್ಯರ ದಕಾರವನ್ನು ಕೋರಿದರು. ವೇದಿಕೆಯಲ್ಲಿ ವೀರ್ ಮುನಿರಾಜ ಅಜ್ರಿ ಉಪಸ್ಥಿತರಿದ್ದರು.


ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಕಾರ್ಯ ಕ್ರಮ ನಿರ್ವಹಿಸಿದರು, ವೀರ್ ನಿಖಿತ್ ವಂದಿಸಿದರು.

Related posts

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya
error: Content is protected !!