September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

ಉಜಿರೆ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆಯು ಇತ್ತೀಚೆಗೆ ಉಜಿರೆಯಲ್ಲಿ ಮಿಲನ್ ಅಧ್ಯಕ್ಷರಾದ ವೀರ್ ಡಾ| ನವೀನ್ ಕುಮಾರ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಜೈನ್ ಮಿಲನ್ ನ ಕಾರ್ಯಕ್ರಮಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸವಿವರವಾಗಿ ಅಧ್ಯಕ್ಷರು ವಿವರಿಸಿ ತಿಳಿಸಿದರು, ವೀರ್ ಭುಜಬಲಿಯವರು ಯಶಸ್ವಿ ಮಾಸಿಕ ಸಭೆ ನಡೆಸುವ ಬಗ್ಗೆ ಸಲಹೆ ನೀಡಿದರು, ಧೀಮಹಿ ಮಹಿಳಾ ಸಮಾಜದ ಅಧ್ಯಕ್ಷೆ ವೀರಾಂಗನ ಶ್ರೀಮತಿ ಡಾಕ್ಟರ್ ರಜತ ಅವರು ಮಾತನಾಡಿ ತಿಂಗಳಿಗೆ ಒಂದು ಸಲ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲು ಇಂತಹ ಸಭೆಗಳಿಂದ ಅವಕಾಶ ದೊರೆಯುತ್ತದೆ ಮತ್ತು ಇದನ್ನು ಎಲ್ಲಾ ಸದಸ್ಯರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಿಲನ್ ನಿರ್ದೇಶಕ ವೀರ್ ಬಿ. ಸೋಮಶೇಖರ ಶೆಟ್ಟಿ ಅವರು ಮಾತನಾಡಿ ಮಿಲನ್ ಸಂಘಟನೆಯ ಮಹತ್ವ ಹಾಗೂ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ಸಂಘಟನೆ ಬಲಗೊಳಿಸುವಲ್ಲಿ ಸದಸ್ಯರ ದಕಾರವನ್ನು ಕೋರಿದರು. ವೇದಿಕೆಯಲ್ಲಿ ವೀರ್ ಮುನಿರಾಜ ಅಜ್ರಿ ಉಪಸ್ಥಿತರಿದ್ದರು.


ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಕಾರ್ಯ ಕ್ರಮ ನಿರ್ವಹಿಸಿದರು, ವೀರ್ ನಿಖಿತ್ ವಂದಿಸಿದರು.

Related posts

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya
error: Content is protected !!