July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

ಉಜಿರೆ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆಯು ಇತ್ತೀಚೆಗೆ ಉಜಿರೆಯಲ್ಲಿ ಮಿಲನ್ ಅಧ್ಯಕ್ಷರಾದ ವೀರ್ ಡಾ| ನವೀನ್ ಕುಮಾರ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಜೈನ್ ಮಿಲನ್ ನ ಕಾರ್ಯಕ್ರಮಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸವಿವರವಾಗಿ ಅಧ್ಯಕ್ಷರು ವಿವರಿಸಿ ತಿಳಿಸಿದರು, ವೀರ್ ಭುಜಬಲಿಯವರು ಯಶಸ್ವಿ ಮಾಸಿಕ ಸಭೆ ನಡೆಸುವ ಬಗ್ಗೆ ಸಲಹೆ ನೀಡಿದರು, ಧೀಮಹಿ ಮಹಿಳಾ ಸಮಾಜದ ಅಧ್ಯಕ್ಷೆ ವೀರಾಂಗನ ಶ್ರೀಮತಿ ಡಾಕ್ಟರ್ ರಜತ ಅವರು ಮಾತನಾಡಿ ತಿಂಗಳಿಗೆ ಒಂದು ಸಲ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲು ಇಂತಹ ಸಭೆಗಳಿಂದ ಅವಕಾಶ ದೊರೆಯುತ್ತದೆ ಮತ್ತು ಇದನ್ನು ಎಲ್ಲಾ ಸದಸ್ಯರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಿಲನ್ ನಿರ್ದೇಶಕ ವೀರ್ ಬಿ. ಸೋಮಶೇಖರ ಶೆಟ್ಟಿ ಅವರು ಮಾತನಾಡಿ ಮಿಲನ್ ಸಂಘಟನೆಯ ಮಹತ್ವ ಹಾಗೂ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ಸಂಘಟನೆ ಬಲಗೊಳಿಸುವಲ್ಲಿ ಸದಸ್ಯರ ದಕಾರವನ್ನು ಕೋರಿದರು. ವೇದಿಕೆಯಲ್ಲಿ ವೀರ್ ಮುನಿರಾಜ ಅಜ್ರಿ ಉಪಸ್ಥಿತರಿದ್ದರು.


ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಕಾರ್ಯ ಕ್ರಮ ನಿರ್ವಹಿಸಿದರು, ವೀರ್ ನಿಖಿತ್ ವಂದಿಸಿದರು.

Related posts

ಎಸ್.ವೈ.ಎಸ್ ಕಾಜೂರು ಸರ್ಕಲ್ ವತಿಯಿಂದ ಸ್ವಚ್ಛತಾ ಆಂದೋಲನ: ಸಾರ್ವಜನಿಕರಿಂದ ಶ್ಲಾಘನೆ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!