24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

ಬೆಳ್ತಂಗಡಿ: ಮೇ 8ರಂದು ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಉತ್ತರಕ್ರಿಯೆ ಮೇ 21ರಂದು ಗುರುವಾಯನಕೆರೆ-ಕುವೆಟ್ಟು ಮಂಜಿಬೆಟ್ಟು, ಎಫ್. ಎಮ್. ಗಾರ್ಡನ್ ನಲ್ಲಿ ನಡೆಯಲಿದ್ದು ಕಾರ್ಯಕ್ರಮ ಪೂರ್ವ ತಯಾರಿ ಬಗ್ಗೆ ಬಂಗೇರರ ಅಭಿಮಾನಿಗಳ ಸಭೆಯು ಮೇ 18ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದ ಸಭಾ ಭವನದಲ್ಲಿ ನಡೆಯಿತು.


ಬಂಗೇರರ ಅಭಿಮಾನಿ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ ಕುಮಾರ ಇಳಂತಿಲ ಕಾರ್ಯಕ್ರಮದ ಬಗ್ಗೆ ತಿಳಿಸಿ ಅಭಿಮಾನಿಗಳು, ಹಿತೈಷಿಗಳು ಭಾಗವಹಿಸಿ ಸಂಪೂರ್ಣ ಸಹಕಾರ ನೀಡಬೇಕು ಎಂದರು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್, ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಪ್ರಧಾನ ಕಾರ್ಯದರ್ಶಿ ನಿತೇಶ್ ಕೋಟ್ಯಾನ್, ಜಿ. ಪ. ಮಾಜಿ ಉಪಾಧ್ಯಕ್ಷ ಧರಣೇ0ದ್ರ ಕುಮಾರ್, ಅಭಿಮಾನಿ ಬಳಗದ ಎನ್. ಲಕ್ಷ್ಮಣ ಗೌಡ ಇಂದಬೆಟ್ಟು, ಬಂಗೇರರ ಪುತ್ರಿಯರಾದ ಪ್ರೀತೀತಾ ವಿಜೇತ್, ಬಿನುತಾ ಬಂಗೇರ, ಅಳಿಯ ಧರ್ಮವಿಜೇತ್, ಕೆ. ವಸಂತ ಬಂಗೇರ ಅಭಿಮಾನಿಗಳು, ಹಿತೈಷಿಗಳು ಹಾಜರಿದ್ದರು.

Related posts

ಮೇ.25: ಧರ್ಮಸ್ಥಳದಲ್ಲಿ ಹತ್ತನಾವಧಿ (ಪತ್ತನಾಜೆ) ಉತ್ಸವ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya
error: Content is protected !!