25.1 C
ಪುತ್ತೂರು, ಬೆಳ್ತಂಗಡಿ
April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಬೆಂಗಳೂರಿನ ಪ್ರಖ್ಯಾತ ಯೂನಿಮೇಕ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ನಡೆಸಿದರು.

ಫಿಟ್ಟರ್, ಟರ್ನರ್ ವೃತ್ತಿಯ ವಿದ್ಯಾರ್ಥಿಗಳಲ್ಲದೇ ಡಿಪ್ಲೋಮಾ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೂ ಆಯ್ಕೆ ಪ್ರಕ್ರಿಯೆಯನ್ನು ಕಂಪೆನಿಯ ಅಧಿಕಾರಿಗಳಾದ ಉಮೇಶ್, ಶಂಕರ್, ಶ್ರೀಕುಮಾರ್ ಹಾಗೂ ಸುಹಾಸ್ ನಡೆಸಿದರು. ಉಮೇಶ್ ಮತ್ತು ಶಂಕರ್ ರವರು ಕಂಪನಿಯ ಕಾರ್ಯವಿಧಾನಗಳು, ಉತ್ಪನ್ನಗಳು ಮತ್ತು ಸೌಲಭ್ಯಗಳ ವಿವರಗಳನ್ನು ನೀಡಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಕೌಶಲ್ಯತೆಯ ಅವಶ್ಯಕತೆಯನ್ನು ತಿಳಿಸಿ, ಇನ್ನು ಮುಂದಿನ ದಿನಗಳಲ್ಲಿ ತಾಂತ್ರಿಕ ಕೌಶಲ್ಯ ಹೊಂದಿರುವವರಿಗೆ ಬಹಳಷ್ಟು ಪ್ರಾಮುಖ್ಯತೆ ಒದಗಿ ಬರಲಿದ್ದು ವೃತ್ತಿ ಕೌಶಲ್ಯತೆಯನ್ನು ಮೈಗೂಡಿಸುವುದರ ಜೊತೆಗೆ ಉತ್ತಮ ನಡತೆ ಸಂವಹನ ಶಕ್ತಿಯನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.


ಸಂದರ್ಶನದಲ್ಲಿ ಒಟ್ಟು 84 ವಿದ್ಯಾರ್ಥಿಗಳು ಭಾಗವಹಿಸಿದ್ದು, 35 ವಿದ್ಯಾರ್ಥಿಗಳು ಆಯ್ಕೆಯಾದರು.
ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಅತಿಥಿಗಳನ್ನು ಸ್ವಾಗತಿಸಿ, ಪರಿಚಯಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಶ್ರವಣ್ ಕುಮಾರ್ ಮತ್ತು ಕುಶ ಇವರು ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ನಡೆಸುವಲ್ಲಿ ಸಹಕರಿಸಿದರು.

Related posts

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ