23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಬೆಂಗಳೂರಿನ ಪ್ರಖ್ಯಾತ ಯೂನಿಮೇಕ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ನಡೆಸಿದರು.

ಫಿಟ್ಟರ್, ಟರ್ನರ್ ವೃತ್ತಿಯ ವಿದ್ಯಾರ್ಥಿಗಳಲ್ಲದೇ ಡಿಪ್ಲೋಮಾ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೂ ಆಯ್ಕೆ ಪ್ರಕ್ರಿಯೆಯನ್ನು ಕಂಪೆನಿಯ ಅಧಿಕಾರಿಗಳಾದ ಉಮೇಶ್, ಶಂಕರ್, ಶ್ರೀಕುಮಾರ್ ಹಾಗೂ ಸುಹಾಸ್ ನಡೆಸಿದರು. ಉಮೇಶ್ ಮತ್ತು ಶಂಕರ್ ರವರು ಕಂಪನಿಯ ಕಾರ್ಯವಿಧಾನಗಳು, ಉತ್ಪನ್ನಗಳು ಮತ್ತು ಸೌಲಭ್ಯಗಳ ವಿವರಗಳನ್ನು ನೀಡಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಕೌಶಲ್ಯತೆಯ ಅವಶ್ಯಕತೆಯನ್ನು ತಿಳಿಸಿ, ಇನ್ನು ಮುಂದಿನ ದಿನಗಳಲ್ಲಿ ತಾಂತ್ರಿಕ ಕೌಶಲ್ಯ ಹೊಂದಿರುವವರಿಗೆ ಬಹಳಷ್ಟು ಪ್ರಾಮುಖ್ಯತೆ ಒದಗಿ ಬರಲಿದ್ದು ವೃತ್ತಿ ಕೌಶಲ್ಯತೆಯನ್ನು ಮೈಗೂಡಿಸುವುದರ ಜೊತೆಗೆ ಉತ್ತಮ ನಡತೆ ಸಂವಹನ ಶಕ್ತಿಯನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.


ಸಂದರ್ಶನದಲ್ಲಿ ಒಟ್ಟು 84 ವಿದ್ಯಾರ್ಥಿಗಳು ಭಾಗವಹಿಸಿದ್ದು, 35 ವಿದ್ಯಾರ್ಥಿಗಳು ಆಯ್ಕೆಯಾದರು.
ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಅತಿಥಿಗಳನ್ನು ಸ್ವಾಗತಿಸಿ, ಪರಿಚಯಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಶ್ರವಣ್ ಕುಮಾರ್ ಮತ್ತು ಕುಶ ಇವರು ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ನಡೆಸುವಲ್ಲಿ ಸಹಕರಿಸಿದರು.

Related posts

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!