22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಬೆಂಗಳೂರಿನ ಪ್ರಖ್ಯಾತ ಯೂನಿಮೇಕ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ನಡೆಸಿದರು.

ಫಿಟ್ಟರ್, ಟರ್ನರ್ ವೃತ್ತಿಯ ವಿದ್ಯಾರ್ಥಿಗಳಲ್ಲದೇ ಡಿಪ್ಲೋಮಾ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೂ ಆಯ್ಕೆ ಪ್ರಕ್ರಿಯೆಯನ್ನು ಕಂಪೆನಿಯ ಅಧಿಕಾರಿಗಳಾದ ಉಮೇಶ್, ಶಂಕರ್, ಶ್ರೀಕುಮಾರ್ ಹಾಗೂ ಸುಹಾಸ್ ನಡೆಸಿದರು. ಉಮೇಶ್ ಮತ್ತು ಶಂಕರ್ ರವರು ಕಂಪನಿಯ ಕಾರ್ಯವಿಧಾನಗಳು, ಉತ್ಪನ್ನಗಳು ಮತ್ತು ಸೌಲಭ್ಯಗಳ ವಿವರಗಳನ್ನು ನೀಡಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಕೌಶಲ್ಯತೆಯ ಅವಶ್ಯಕತೆಯನ್ನು ತಿಳಿಸಿ, ಇನ್ನು ಮುಂದಿನ ದಿನಗಳಲ್ಲಿ ತಾಂತ್ರಿಕ ಕೌಶಲ್ಯ ಹೊಂದಿರುವವರಿಗೆ ಬಹಳಷ್ಟು ಪ್ರಾಮುಖ್ಯತೆ ಒದಗಿ ಬರಲಿದ್ದು ವೃತ್ತಿ ಕೌಶಲ್ಯತೆಯನ್ನು ಮೈಗೂಡಿಸುವುದರ ಜೊತೆಗೆ ಉತ್ತಮ ನಡತೆ ಸಂವಹನ ಶಕ್ತಿಯನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.


ಸಂದರ್ಶನದಲ್ಲಿ ಒಟ್ಟು 84 ವಿದ್ಯಾರ್ಥಿಗಳು ಭಾಗವಹಿಸಿದ್ದು, 35 ವಿದ್ಯಾರ್ಥಿಗಳು ಆಯ್ಕೆಯಾದರು.
ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಅತಿಥಿಗಳನ್ನು ಸ್ವಾಗತಿಸಿ, ಪರಿಚಯಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಶ್ರವಣ್ ಕುಮಾರ್ ಮತ್ತು ಕುಶ ಇವರು ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ನಡೆಸುವಲ್ಲಿ ಸಹಕರಿಸಿದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ಬಿಗೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ “ಡೈಮಂಡ್ ಪ್ಲಸ್” ಪ್ರಶಸ್ತಿ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya
error: Content is protected !!