September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಬೆಂಗಳೂರಿನ ಪ್ರಖ್ಯಾತ ಯೂನಿಮೇಕ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ನಡೆಸಿದರು.

ಫಿಟ್ಟರ್, ಟರ್ನರ್ ವೃತ್ತಿಯ ವಿದ್ಯಾರ್ಥಿಗಳಲ್ಲದೇ ಡಿಪ್ಲೋಮಾ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೂ ಆಯ್ಕೆ ಪ್ರಕ್ರಿಯೆಯನ್ನು ಕಂಪೆನಿಯ ಅಧಿಕಾರಿಗಳಾದ ಉಮೇಶ್, ಶಂಕರ್, ಶ್ರೀಕುಮಾರ್ ಹಾಗೂ ಸುಹಾಸ್ ನಡೆಸಿದರು. ಉಮೇಶ್ ಮತ್ತು ಶಂಕರ್ ರವರು ಕಂಪನಿಯ ಕಾರ್ಯವಿಧಾನಗಳು, ಉತ್ಪನ್ನಗಳು ಮತ್ತು ಸೌಲಭ್ಯಗಳ ವಿವರಗಳನ್ನು ನೀಡಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಕೌಶಲ್ಯತೆಯ ಅವಶ್ಯಕತೆಯನ್ನು ತಿಳಿಸಿ, ಇನ್ನು ಮುಂದಿನ ದಿನಗಳಲ್ಲಿ ತಾಂತ್ರಿಕ ಕೌಶಲ್ಯ ಹೊಂದಿರುವವರಿಗೆ ಬಹಳಷ್ಟು ಪ್ರಾಮುಖ್ಯತೆ ಒದಗಿ ಬರಲಿದ್ದು ವೃತ್ತಿ ಕೌಶಲ್ಯತೆಯನ್ನು ಮೈಗೂಡಿಸುವುದರ ಜೊತೆಗೆ ಉತ್ತಮ ನಡತೆ ಸಂವಹನ ಶಕ್ತಿಯನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.


ಸಂದರ್ಶನದಲ್ಲಿ ಒಟ್ಟು 84 ವಿದ್ಯಾರ್ಥಿಗಳು ಭಾಗವಹಿಸಿದ್ದು, 35 ವಿದ್ಯಾರ್ಥಿಗಳು ಆಯ್ಕೆಯಾದರು.
ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಅತಿಥಿಗಳನ್ನು ಸ್ವಾಗತಿಸಿ, ಪರಿಚಯಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಶ್ರವಣ್ ಕುಮಾರ್ ಮತ್ತು ಕುಶ ಇವರು ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ನಡೆಸುವಲ್ಲಿ ಸಹಕರಿಸಿದರು.

Related posts

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya
error: Content is protected !!