23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ‌ ಬೈಕಿನಲ್ಲಿ ಬಂದ ತಂಡವೊಂದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಅಬ್ದುಲ್ ಫಾರುಕ್, ಮೈಮುನಾ, ಸೌಧಾ, ಮೈಮುನಾ ಸಿದ್ದಿಕ್ ಹಾಗೂ ಮಕ್ಕಳು ಉಜಿರೆಯ ಸಂಬಂಧಿಕರ ಮನೆಗೆ ಹೋಗಿ ರಾತ್ರಿ 11.30ರ ಸುಮಾರಿಗೆ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದ ವೇಳೆ ಕನ್ಯಾಡಿ ಶಾಲೆಯ ಸಮೀಪ ಎರಡು ಬೈಕ್ ಗಳಲ್ಲಿ ಬಂದ ಮೂವರು ಕಾರನ್ನು ತಡೆದು ಕಾರು ಚಾಲಕನ ಮೇಲೆ ಹಲ್ಲೆನಡೆಸಿ ಕಾರಿನ ಕೀಯನ್ನು ಕಸಿದುಕೊಂಡಿದ್ದಾನೆ ಅಲ್ಲದೆ ಕಾರಿನ ಇನ್ನೊಂದು ಬದಿಯ ಡೋರ್ ಅನ್ನು ಬಲವಂತವಾಗಿ ತೆರೆದ ಆರೋಪಿಗಳು ಮಹಿಳೆಯರ ಮೇಲೆ ಕೈಮಾಡಿ ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ವರ್ತಿಸಿದ್ದಲ್ಲದೆ ಕಾರಿನಲ್ಲಿದ್ದವರ ಕೈಯಲ್ಲಿದ್ದ ಮೊಬೈಲ್ ಅನ್ನು ಕಸಿದುಕೊಂಡು ಎಸೆದು ಹಾನಿಗೊಳಿಸಿದ್ದಾರೆ. ಅಲ್ಲದೆ ಕಾರಿನ ಮೇಲೂ ಕಾಲಿನಿಂದ ತುಳಿದಿದ್ದಾರೆ ಈ ವೇಳೆ ಕಾರಿನಲ್ಲಿದ್ದವರು ಬೊಬ್ಬೆ ಹಾಕಿದ್ದು ದಾರಿಯಲ್ಲಿ ಬಂದ ಪರಿಚಯದವರು ವಾಹನ ನಿಲ್ಲಿಸಿ ಜಗಳ ಬಿಡಿಸಿದ್ದಾರೆ.

ಈ ವೇಳೆ ಆರೋಪಿಗಳು ಮೂವರೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಪೊಲೀಸರಿಗೆ ದೂರು ನೀಡಿದರೆ ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ಪರಾರಿ ಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಇದೀಗ ಘಟನೆಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Related posts

ನವೋದಯ ಪ್ರವೇಶ ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಾರಾವಿ: ಸಂತ ಅಂತೋನಿ ಕಾಲೇಜಿನಲ್ಲಿ ‘ಫೋಕ್ಸೋ ಕಾಯ್ದೆ ಮತ್ತು ವ್ಯಸನಮುಕ್ತ ಕಾಲೇಜು’ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!