September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ‌ ಬೈಕಿನಲ್ಲಿ ಬಂದ ತಂಡವೊಂದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಅಬ್ದುಲ್ ಫಾರುಕ್, ಮೈಮುನಾ, ಸೌಧಾ, ಮೈಮುನಾ ಸಿದ್ದಿಕ್ ಹಾಗೂ ಮಕ್ಕಳು ಉಜಿರೆಯ ಸಂಬಂಧಿಕರ ಮನೆಗೆ ಹೋಗಿ ರಾತ್ರಿ 11.30ರ ಸುಮಾರಿಗೆ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದ ವೇಳೆ ಕನ್ಯಾಡಿ ಶಾಲೆಯ ಸಮೀಪ ಎರಡು ಬೈಕ್ ಗಳಲ್ಲಿ ಬಂದ ಮೂವರು ಕಾರನ್ನು ತಡೆದು ಕಾರು ಚಾಲಕನ ಮೇಲೆ ಹಲ್ಲೆನಡೆಸಿ ಕಾರಿನ ಕೀಯನ್ನು ಕಸಿದುಕೊಂಡಿದ್ದಾನೆ ಅಲ್ಲದೆ ಕಾರಿನ ಇನ್ನೊಂದು ಬದಿಯ ಡೋರ್ ಅನ್ನು ಬಲವಂತವಾಗಿ ತೆರೆದ ಆರೋಪಿಗಳು ಮಹಿಳೆಯರ ಮೇಲೆ ಕೈಮಾಡಿ ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ವರ್ತಿಸಿದ್ದಲ್ಲದೆ ಕಾರಿನಲ್ಲಿದ್ದವರ ಕೈಯಲ್ಲಿದ್ದ ಮೊಬೈಲ್ ಅನ್ನು ಕಸಿದುಕೊಂಡು ಎಸೆದು ಹಾನಿಗೊಳಿಸಿದ್ದಾರೆ. ಅಲ್ಲದೆ ಕಾರಿನ ಮೇಲೂ ಕಾಲಿನಿಂದ ತುಳಿದಿದ್ದಾರೆ ಈ ವೇಳೆ ಕಾರಿನಲ್ಲಿದ್ದವರು ಬೊಬ್ಬೆ ಹಾಕಿದ್ದು ದಾರಿಯಲ್ಲಿ ಬಂದ ಪರಿಚಯದವರು ವಾಹನ ನಿಲ್ಲಿಸಿ ಜಗಳ ಬಿಡಿಸಿದ್ದಾರೆ.

ಈ ವೇಳೆ ಆರೋಪಿಗಳು ಮೂವರೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಪೊಲೀಸರಿಗೆ ದೂರು ನೀಡಿದರೆ ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ಪರಾರಿ ಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಇದೀಗ ಘಟನೆಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Related posts

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!