March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ ಅಪಾಯಕಾರಿ ಸ್ಫೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮೋದ್ ದಿಡುಪೆ ಹಾಗೂ ಶಶಿರಾಜ್ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಮೇ 18ರಂದು ರಾತ್ರಿ ಪೊಲೀಸರು ಬಂಧಿಸಿದ್ದರು.

ಇದನ್ನು ವಿರೋಧಿಸಿ ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಕಾರ್ಯಕರ್ತರು ಶಶಿರಾಜ್ ಶೆಟ್ಟಿ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಬಂಧಿಸಲಾಗಿದೆ ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಅಗ್ರಹಿಸಿ ಬೆಳ್ತಂಗಡಿ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದರು. ಇದೀಗ ಸರ್ಕಾರಿ ಕರ್ತವ್ಯ ಅಡ್ಡಿಪಡಿಸಿದ್ದಾರೆ ಎಂದು ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!