July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

ಬೆಳ್ತಂಗಡಿ: ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಇಂದು (ಮೇ20) ಬೆಳಗ್ಗೆ ಗುರಿಪಳ್ಳ ಸಮೀಪ ನಡೆದಿದೆ.


ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್ ಗಾತ್ರದ ಮರ ವಿದ್ಯುತ್ ಟವರ್ ಮೇಲೆ ಉರುಳಿದೆ. ಈ ಸಂದರ್ಭ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಕನ್ಯಾಡಿಯ ರಮೇಶ್ ಎಂಬವರು ಅದೇ ರಸ್ತೆಯಲ್ಲಿ ಇಂದಬೆಟ್ಟು ಕಡೆ ಹೋಗುತ್ತಿದ್ದು ಮರದ ಭಾಗ ತಲೆಗೆ ಬಡಿದಿದೆ. ಕೂದಲೆಳೆಯ ಅಂತರದಲ್ಲಿ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಘಟನೆಯಿಂದ ಒಂದು ಗಂಟೆಗಿಂತ ಅಧಿಕ ಕಾಲ ಗುರಿಪಳ್ಳ-ಇಂದಬೆಟ್ಟು ರಸ್ತೆ ಸಂಪರ್ಕ ಕಡಿತಗೊಂಡಿತು. ಮೆಸ್ಕಾಂ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ಮರ ತೆರವುಗೊಳಿಸಿದರು. ಕಕ್ಕಿಂಜೆ ಸಬ್ ಸ್ಟೇಷನ್ ವಿದ್ಯುತ್ ಪೂರೈಕೆಯಲ್ಲಿ ಎರಡು ತಾಸಿಗಿಂತ ಅಧಿಕ ಕಾಲ ವ್ಯತ್ಯಯ ಕಂಡುಬಂತು 33ಕೆವಿ ವಿದ್ಯುತ್ ಟವರ್ ಗೆ ಕೊಂಚ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

Related posts

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಪದ್ಮಲತಾ ನಿಗೂಢ ಸಾವು ಪ್ರಕರಣ: ಎಸ್‌ಐಟಿಗೆ ದೂರು ನೀಡಲು ಸಿಪಿಐಎಂ ನಾಯಕರ ಜೊತೆ ಆಗಮಿಸಿದ ಮೃತಳ ಸಹೋದರಿ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya
error: Content is protected !!