32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

ಬೆಳ್ತಂಗಡಿ: ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಇಂದು (ಮೇ20) ಬೆಳಗ್ಗೆ ಗುರಿಪಳ್ಳ ಸಮೀಪ ನಡೆದಿದೆ.


ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್ ಗಾತ್ರದ ಮರ ವಿದ್ಯುತ್ ಟವರ್ ಮೇಲೆ ಉರುಳಿದೆ. ಈ ಸಂದರ್ಭ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಕನ್ಯಾಡಿಯ ರಮೇಶ್ ಎಂಬವರು ಅದೇ ರಸ್ತೆಯಲ್ಲಿ ಇಂದಬೆಟ್ಟು ಕಡೆ ಹೋಗುತ್ತಿದ್ದು ಮರದ ಭಾಗ ತಲೆಗೆ ಬಡಿದಿದೆ. ಕೂದಲೆಳೆಯ ಅಂತರದಲ್ಲಿ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಘಟನೆಯಿಂದ ಒಂದು ಗಂಟೆಗಿಂತ ಅಧಿಕ ಕಾಲ ಗುರಿಪಳ್ಳ-ಇಂದಬೆಟ್ಟು ರಸ್ತೆ ಸಂಪರ್ಕ ಕಡಿತಗೊಂಡಿತು. ಮೆಸ್ಕಾಂ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ಮರ ತೆರವುಗೊಳಿಸಿದರು. ಕಕ್ಕಿಂಜೆ ಸಬ್ ಸ್ಟೇಷನ್ ವಿದ್ಯುತ್ ಪೂರೈಕೆಯಲ್ಲಿ ಎರಡು ತಾಸಿಗಿಂತ ಅಧಿಕ ಕಾಲ ವ್ಯತ್ಯಯ ಕಂಡುಬಂತು 33ಕೆವಿ ವಿದ್ಯುತ್ ಟವರ್ ಗೆ ಕೊಂಚ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

Related posts

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

ಫೆ.1-5: ಶ್ರೀ ಉಮಾಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya
error: Content is protected !!