September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

ಬೆಳ್ತಂಗಡಿ : ” ನಾವಿಂದು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕಾಗಿದೆ. ಇಂದು ಪ್ರತಿ ಮನೆಯವರು ತಮ್ಮ ಮಕ್ಕಳಿಗೆ ಈ ರೀತಿಯ ಸಂಸ್ಕಾರವನ್ನು ಕಳಿಸಿದರೆ ಖಂಡಿತವಾಗಿಯೂ ನಮ್ಮ ಸಮಾಜದ ಯಾವುದೇ ಮಕ್ಕಳು ದಾರಿ ತಪ್ಪಲು ಸಾಧ್ಯವಿಲ್ಲ. ಅಂತಹ ಕಾರ್ಯವನ್ನು ನಾವೆಲ್ಲ ಜೊತೆ ಸೇರಿ ಮಾಡೋಣ. ಇನ್ನೊಂದು ಮುಖ್ಯ ವಿಚಾರವೆಂದರೆ ಇದೇ ತಿಂಗಳು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಮ್ಮ ಮಹಿಳಾ ಒಕ್ಕೂಟದ ವಿಶೇಷ ಸಮ್ಮೇಳನವು ನಡೆಯಲಿದೆ. ಈ ಸಮ್ಮೇಳನದಲ್ಲಿ ತಾವೆಲ್ಲರೂ ಪಾಲ್ಗೊಂಡು ತಮ್ಮ ಸಂಘಟನೆಯ ಬಲವನ್ನು ಇನ್ನಷ್ಟು ವೃದ್ಧಿಸಿಕೊಳ್ಳಿ ” ಎಂದು ಶ್ರೀಮತಿ ಸೋನಿಯಾ ಯಶೋವರ್ಮರವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.


ಶಾಂತಿಶ್ರೀ ಮಹಿಳಾ ಸಮಾಜ ಬೆಳ್ತಂಗಡಿಯ ವತಿಯಿಂದ ಬೆಳ್ತಂಗಡಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಏರ್ಪಡಿಸಲಾದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ ಎಂಬ ಕಾರ್ಯಕ್ರಮವನ್ನು ಮೇ 19 ರಂದು ಉದ್ಘಾಟಿಸಿ ಮಾತನಾಡಿದರು.


ಶಾಂತಿಶ್ರೀ ಮಹಿಳಾ ಸಮಾಜದ ಅಧ್ಯಕ್ಷೆ ಶ್ರೀಮತಿ ತ್ರಿಶಲಾ ಜೈನ್ ಕೆ ಎಸ್ ರವರು ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮದ ಮಹತ್ವವನ್ನು ವ್ಯಕ್ತಪಡಿಸಿದರು. ಆ ಬಳಿಕ ಕಾವ್ಯಶ್ರೀ ಆಜೇರು ಇವರ ಹಾಡುಗಾರಿಕೆಯೊಂದಿಗೆ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಾರ್ಕಳದ ಮುನಿರಾಜ ರೆಂಜಾಳ ಇವರ ಪ್ರವಚನ ಮೂಲಕ ಶ್ರೀಪತಿ ನಾಯಕ್ ಮತ್ತು ಚಂದ್ರಶೇಖರ್ ಅವರ ಸಹಕಾರದೊಂದಿಗೆ ಶ್ರೀಜಿನ ಶಾಂತಿನಾಥ ಚರಿತೆ ಎಂಬ ಕಥಾ ಭಾಗವನ್ನು ಅತ್ಯುತ್ತಮ ರೀತಿಯಲ್ಲಿ ವ್ಯಕ್ತಪಡಿಸಿ ಸರ್ವರ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮವನ್ನು ಸಂಘಟನೆಯ ಕಾರ್ಯದರ್ಶಿ ಶ್ರೀಮತಿ ರಾಜಶ್ರೀ ಎಸ್ ಹೆಗ್ಡೆ ಸರ್ವರನ್ನು ಸ್ವಾಗತಿಸಿ, ಸಂಘಟನೆಯ ಕೋಶಾಧಿಕಾರಿ ಶ್ರೀಮತಿ ಅನುಪಮ ರವರು ಧನ್ಯವಾದವಿತ್ತರು. ಶ್ರೀಮತಿ ದವಳ ಕಾರ್ಯಕ್ರಮ ನಿರೂಪಿಸಿದರು.

Related posts

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಕಲ್ಮಂಜ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya
error: Content is protected !!