23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

ಬೆಳ್ತಂಗಡಿ: ಆಟೋ ರಿಕ್ಷಾ ಮಗುಚಿ ಬಿದ್ದು ಗಂಭೀರ ಗಾಯಗೊಂಡ ಆಟೋ ಚಾಲಕ ಮೃತಪಟ್ಟ ಘಟನೆ ಮೇ 19ರಂದು ರಾತ್ರಿ ಪದ್ಮುಂಜದಲ್ಲಿ ನಡೆದಿದೆ.

ಇಳಂತಿಲ ಗ್ರಾಮದ ಗಂಡಿಬಾಗಿಲು ನಿವಾಸಿ ದಿನೇಶ್ (29 ವ) ಮೃತ ಅಟೋ ಚಾಲಕ. ಪದ್ಮುಂಜಕ್ಕೆ ಬಾಡಿಗೆಗೆಂದು ತೆರಳಿದ ಇವರ ರಿಕ್ಷಾ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಇವರ ತಲೆಗೆ ಗಂಭೀರ ಗಾಯವಾಗಿತ್ತು. ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಇವರು ಮೃತಪಟ್ಟಿದ್ದಾರೆ.

ಇವರು ಸೌಮ್ಯ ಸ್ವಭಾದವರಾಗಿದ್ದು, ಅಟೋ ರಿಕ್ಷಾ ಚಾಲನೆಯೊಂದಿಗೆ ಉಪ್ಪಿನಂಗಡಿಯ ಸಹಕಾರಿ ಬ್ಯಾಂಕೊಂದರಲ್ಲಿ ಪಿಗ್ಮಿ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಾ ಎಲ್ಲರಿಗೂ ಚಿರಪರಿಚಿತರಾಗಿದ್ದರು.

ರಿಕ್ಷಾದಲ್ಲಿ ಎರಡು ಮಕ್ಕಳು ಹಾಗೂ ಅವರ ತಂದೆ ಪ್ರಯಾಣಿಕರಾಗಿದ್ದು, ಅವರು ಅಲ್ಪಸ್ವಲ್ಪ ತರಚಿದ ಗಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಅವಿವಾಹಿತರಾಗಿರುವ ಮೃತ ದಿನೇಶ್ ಅವರು ತಾಯಿ, ಓರ್ವ ಸಹೋದರನನ್ನು ಅಗಲಿದ್ದಾರೆ.

Related posts

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!