30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

ಕೊಕ್ಕಡ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಮಾನ್ಯ ಕಾರ್ಯನಿರ್ವಹಣಾಧಿಕಾರಿ ವೈಜಣ್ಣನವರು ನರೇಗಾ ಯೋಜನೆ ಕುರಿತು ಚರ್ಚಿಸಿ, ಸಲಹೆ ಸೂಚನೆಗಳನ್ನು ನೀಡಿದರು.

ನರೇಗಾದಲ್ಲಿ ಮಾನವ ದಿನ ಪ್ರಗತಿ ಸಾಧಿಸುವಕ್ಕಾಗಿ ಹೆಚ್ಚಾಗಿ ಸಾರ್ವಜನಿಕ ಕಾಮಗಾರಿಗಳಲ್ಲಿ ಭಾಗವಹಿಸಿ, ತಮ್ಮ ಗ್ರಾ. ಪಂ ಅಭಿವೃದ್ಧಿ ಪಡಿಸಿಕೊಳ್ಳಿ. ನರೇಗಾ ಯೋಜನೆಯಿಂದ ಸಿಗುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕಾರ್ಯನಿರ್ವಹಾಧಿಕಾರಿಯವರು ತಿಳಿಸಿದರು.


ಈ ಸಂದರ್ಭ ರೋಜ್ ಗಾರ್ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ ,ತಾಂತ್ರಿಕ ಸಹಾಯಕ ಅಭಿಯಂತರರು ಗೌತಮ್ ಪಿ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ. ಪಂ ಸಿಬ್ಬಂದಿಗಳಾದ ಕೇಶವ, ಗುಣಾಶೀಲ ಬಿ, ರಾಜೇಶ್ವರಿ ಹೆಚ್, ನಿರ್ಮಲ, ಸಂಜೀವಿನಿ ಯಂ.ಬಿ.ಕೆ ಯಶೋಧ, ಎಲ್. ಸಿ. ಆರ್. ಪಿ ಗಾಯತ್ರಿ, ಪಶು ಸಖಿ ದೀಪಿಕಾ, ಕೃಷಿ ಸಖಿ ನವ್ಯ ಉಪಸ್ಥಿತರಿದ್ದರು.

Related posts

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ವಿಜೃಂಭಣೆಯ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya
error: Content is protected !!