30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

ಬೆಳ್ತಂಗಡಿ: ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಇಂದು (ಮೇ20) ಬೆಳಗ್ಗೆ ಗುರಿಪಳ್ಳ ಸಮೀಪ ನಡೆದಿದೆ.


ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್ ಗಾತ್ರದ ಮರ ವಿದ್ಯುತ್ ಟವರ್ ಮೇಲೆ ಉರುಳಿದೆ. ಈ ಸಂದರ್ಭ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಕನ್ಯಾಡಿಯ ರಮೇಶ್ ಎಂಬವರು ಅದೇ ರಸ್ತೆಯಲ್ಲಿ ಇಂದಬೆಟ್ಟು ಕಡೆ ಹೋಗುತ್ತಿದ್ದು ಮರದ ಭಾಗ ತಲೆಗೆ ಬಡಿದಿದೆ. ಕೂದಲೆಳೆಯ ಅಂತರದಲ್ಲಿ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಘಟನೆಯಿಂದ ಒಂದು ಗಂಟೆಗಿಂತ ಅಧಿಕ ಕಾಲ ಗುರಿಪಳ್ಳ-ಇಂದಬೆಟ್ಟು ರಸ್ತೆ ಸಂಪರ್ಕ ಕಡಿತಗೊಂಡಿತು. ಮೆಸ್ಕಾಂ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ಮರ ತೆರವುಗೊಳಿಸಿದರು. ಕಕ್ಕಿಂಜೆ ಸಬ್ ಸ್ಟೇಷನ್ ವಿದ್ಯುತ್ ಪೂರೈಕೆಯಲ್ಲಿ ಎರಡು ತಾಸಿಗಿಂತ ಅಧಿಕ ಕಾಲ ವ್ಯತ್ಯಯ ಕಂಡುಬಂತು 33ಕೆವಿ ವಿದ್ಯುತ್ ಟವರ್ ಗೆ ಕೊಂಚ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

Related posts

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

Suddi Udaya
error: Content is protected !!