April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

ಬೆಳ್ತಂಗಡಿ: ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಇಂದು (ಮೇ20) ಬೆಳಗ್ಗೆ ಗುರಿಪಳ್ಳ ಸಮೀಪ ನಡೆದಿದೆ.


ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್ ಗಾತ್ರದ ಮರ ವಿದ್ಯುತ್ ಟವರ್ ಮೇಲೆ ಉರುಳಿದೆ. ಈ ಸಂದರ್ಭ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಕನ್ಯಾಡಿಯ ರಮೇಶ್ ಎಂಬವರು ಅದೇ ರಸ್ತೆಯಲ್ಲಿ ಇಂದಬೆಟ್ಟು ಕಡೆ ಹೋಗುತ್ತಿದ್ದು ಮರದ ಭಾಗ ತಲೆಗೆ ಬಡಿದಿದೆ. ಕೂದಲೆಳೆಯ ಅಂತರದಲ್ಲಿ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಘಟನೆಯಿಂದ ಒಂದು ಗಂಟೆಗಿಂತ ಅಧಿಕ ಕಾಲ ಗುರಿಪಳ್ಳ-ಇಂದಬೆಟ್ಟು ರಸ್ತೆ ಸಂಪರ್ಕ ಕಡಿತಗೊಂಡಿತು. ಮೆಸ್ಕಾಂ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ಮರ ತೆರವುಗೊಳಿಸಿದರು. ಕಕ್ಕಿಂಜೆ ಸಬ್ ಸ್ಟೇಷನ್ ವಿದ್ಯುತ್ ಪೂರೈಕೆಯಲ್ಲಿ ಎರಡು ತಾಸಿಗಿಂತ ಅಧಿಕ ಕಾಲ ವ್ಯತ್ಯಯ ಕಂಡುಬಂತು 33ಕೆವಿ ವಿದ್ಯುತ್ ಟವರ್ ಗೆ ಕೊಂಚ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

Related posts

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎ.12:ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ ಅಳದಂಗಡಿಯಲ್ಲಿ ಹನುಮಯಾಗ ಹಾಗೂ ಹನುಮೋತ್ಸವ ಕಾರ್ಯಕ್ರಮ: ಭಾರತೀಯರ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ತುಳು ನಾಟಕ ಪ್ರದರ್ಶನ

Suddi Udaya
error: Content is protected !!