25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

ಬೆಳ್ತಂಗಡಿ: ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಇಂದು (ಮೇ20) ಬೆಳಗ್ಗೆ ಗುರಿಪಳ್ಳ ಸಮೀಪ ನಡೆದಿದೆ.


ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್ ಗಾತ್ರದ ಮರ ವಿದ್ಯುತ್ ಟವರ್ ಮೇಲೆ ಉರುಳಿದೆ. ಈ ಸಂದರ್ಭ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಕನ್ಯಾಡಿಯ ರಮೇಶ್ ಎಂಬವರು ಅದೇ ರಸ್ತೆಯಲ್ಲಿ ಇಂದಬೆಟ್ಟು ಕಡೆ ಹೋಗುತ್ತಿದ್ದು ಮರದ ಭಾಗ ತಲೆಗೆ ಬಡಿದಿದೆ. ಕೂದಲೆಳೆಯ ಅಂತರದಲ್ಲಿ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಘಟನೆಯಿಂದ ಒಂದು ಗಂಟೆಗಿಂತ ಅಧಿಕ ಕಾಲ ಗುರಿಪಳ್ಳ-ಇಂದಬೆಟ್ಟು ರಸ್ತೆ ಸಂಪರ್ಕ ಕಡಿತಗೊಂಡಿತು. ಮೆಸ್ಕಾಂ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ಮರ ತೆರವುಗೊಳಿಸಿದರು. ಕಕ್ಕಿಂಜೆ ಸಬ್ ಸ್ಟೇಷನ್ ವಿದ್ಯುತ್ ಪೂರೈಕೆಯಲ್ಲಿ ಎರಡು ತಾಸಿಗಿಂತ ಅಧಿಕ ಕಾಲ ವ್ಯತ್ಯಯ ಕಂಡುಬಂತು 33ಕೆವಿ ವಿದ್ಯುತ್ ಟವರ್ ಗೆ ಕೊಂಚ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

Related posts

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

Suddi Udaya

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!