ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ರಸ್ತೆ ಮಧ್ಯದಲ್ಲೇ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕೆಟ್ಟು ನಿಂತ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಬೆಳಿಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಸ್ಸು ಕೆಟ್ಟು ನಿಂತಾ ಪರಿಣಾಮ ನೂರಾರು ವಾಹನಗಳು ಫುಲ್ ಟ್ರಾಫಿಕ್ ಜಾಮ್ ಯಾಗಿದ್ದು ಇದರ ಮದ್ಯ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಸಹಾ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಿದ್ದು, ಟ್ರಾಫಿಕ್ ಜಾಮ್ ನಿಂದ ಪ್ರವಾಸಿಗರು ಪರದಾಡುವಂತಾಯಿತು.

ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್ ಹಿನ್ನಲೆಯಲ್ಲಿ ವಿಷಯ ತಿಳಿದ ಹೈವೇ ಪೆಟ್ರೋಲ್ ನ ಎ.ಎಸ್.ಐ ಶಶಿ ಮತ್ತು ಪೊಲೀಸ್ ವಾಹನ ಚಾಲಕ ಸ್ಥಳಕ್ಕೆ ಧಾವಿಸಿ ಟ್ರಾಫಿಕ್ ಕ್ಲಿಯರ್ ಮಾಡಲು ಹರಸಹಾಸ ಪಟ್ಟರು.

Leave a Comment

error: Content is protected !!