28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

ಬೆಳ್ತಂಗಡಿ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರು ನಿರ್ಬಂಧ ಹೇರಿದ್ದಾರೆ.

ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಡಿಯಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರನ್ನು ಪೊಲೀಸರು ಬಂಧಿಸಿದ್ದು, ಇದರ ವಿರುದ್ಧ ಮೇ 20ರಂದು ಬೆಳಗ್ಗೆ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಲು ಯುವ ಮೋರ್ಚಾ ಸಿದ್ಧತೆ ನಡೆಸಿತ್ತು. ಬೆಳ್ತಂಗಡಿಯ ಸಂತೆಕಟ್ಟೆಯ ಅಯ್ಯಪ್ಪ ಮಂದಿರದಿಂದ ತಾಲೂಕು ಕಚೇರಿಯವರೆಗೆ ಜಾಥಾ ನಡೆಸಲೆಂದು ಕಾರ್ಯಕರ್ತರು ಸೇರಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸರು ಧ್ವನಿವರ್ಧಕ ಮೂಲಕ ನೀತಿ ಸಂಹಿತೆಯ ಕುರಿತು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಪ್ರತಿಭಟನೆಗಳಿಗೆ ಅವಕಾಶವಿಲ್ಲ ಎಂದು ಸೂಚನೆ ನೀಡಿದ್ದಾರೆ. ಬೆಳ್ತಂಗಡಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಪೊಲೀಸರಿಂದ ನಿರ್ಬಂಧ ಹಿನ್ನೆಲೆಯಲ್ಲಿ ಖಾಸಗಿ ಸಭಾಂಗಣದಲ್ಲಿ ಯುವ ಮೋರ್ಚಾ ಸಭೆ ನಡೆಸುವ ಸಾಧ್ಯತೆಗಳಿವೆ.

Related posts

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya
error: Content is protected !!