ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ: ಮಾಳವಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಮಾಳವಯಾನೆ ಮಲ್ಲವರ ಯುವಕ ಸಂಘ ಇದರ 28ನೇ ವರುಷದ ವಾರ್ಷಿಕೋತ್ಸವದ ಪ್ರಯುಕ್ತ ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ ಏರ್ಪಡಿಸಲಾತ್ತು.

ಕಾರ್ಯಕ್ರಮವನ್ನು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಭುವನೇಶ್ ಗೇರುಕಟ್ಟೆ ದೀಪ ಬೇಳಗಿಸುವ ಮುಖಾಂತರ ಕಾರ್ಯಕ್ರಮ ಪ್ರಾರಂಭಗೂಂಡಿತ್ತು.

ಈ ಸಂದರ್ಭದಲ್ಲಿ ಸಮಾಜದ ಹೀರಿಯರು ನಿವೃತ ಆರಣ್ಯಧಿಕಾರಿ ಸೀತಾರಾಮ ಹೆಗ್ಡೆ ಕುತ್ಯಾರು, ಮಾಳವ ಯಾನೆ ಮಲ್ಲನ ಸಮಾಜದ ಅಧ್ಯಕ್ಷ ಶಿವಶಂಕರ್, ಕಾರ್ಯದರ್ಶಿ ಮೋನಪ್ಪ ಬೆಳ್ತಂಗಡಿ , ಕೋಶಾಧಿಕಾರಿ ಸತೀಶ್ ರಾಜ್ ಬೆಳ್ತಂಗಡಿ ,ಮಾಳವ ಯಾನೆ ಮಲ್ಲವ ಯುವಕ ಸಂಘದ ಅಧ್ಯಕ್ಷ ಮೋಹನ್ ಬೆಳ್ತಂಗಡಿ, ಕಾರ್ಯದರ್ಶಿ ಈಶ್ವರ ಅಲ್ಲಾಟಬೈಲು , ಕೋಶಾಧಿಕಾರಿ ಲೀಲಾಧರ ಬಂಗಾಡಿ ಉಪಸ್ಥಿತರಿದ್ದರು.

ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸಿ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Comment

error: Content is protected !!