July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 13 ರಿಂದ ಪ್ರಾರಂಭಗೊಂಡು ಮೇ 21 ರ ವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಮೇ 18 ರಂದು ಅಂಗಣೋತ್ಸವ, ರಾತ್ರಿ ಮಹಾ ರಥೋತ್ಸವ, ಕವಾಟ ಬಂಧನ ನಡೆಯಿತು. ಮೇ. 19 ರಂದು ಕವಾಟೋದ್ಘಾಟನೆ , ಮಹಾಪೂಜೆ, ಸಂಜೆ ತೆಪ್ಪೋತ್ಸವ, ಕಟ್ಟೆಪೂಜೆ, ವಸಂತ ಕಟ್ಟೆಯಲ್ಲಿ ಓಕುಳಿ, ಮೀನಗುಂಡಿಯಲ್ಲಿ ಅವಭೃತೋತ್ಸವ, ಧ್ವಜ ಅವರೋಹಣ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ದಿನೇಶ್ ಎಂ. , ಅರ್ಚಕರು, ಸಮಿತಿಯ ಸದಸ್ಯರು, ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಇಂದು (ಮೇ 20) ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ, ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮ ನಡೆಯಲಿದೆ. ಮೇ.21 ರಂದು ಪೂರ್ವಾಹ್ನ ಶುದ್ಧ ಕಲಶ ಸಂಪ್ರೋಕ್ಷಣೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

Related posts

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಮೋದಿ ಸರಕಾರಕ್ಕೆ 12 ವರ್ಷ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!