22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

ಕೊಕ್ಕಡ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಮಾನ್ಯ ಕಾರ್ಯನಿರ್ವಹಣಾಧಿಕಾರಿ ವೈಜಣ್ಣನವರು ನರೇಗಾ ಯೋಜನೆ ಕುರಿತು ಚರ್ಚಿಸಿ, ಸಲಹೆ ಸೂಚನೆಗಳನ್ನು ನೀಡಿದರು.

ನರೇಗಾದಲ್ಲಿ ಮಾನವ ದಿನ ಪ್ರಗತಿ ಸಾಧಿಸುವಕ್ಕಾಗಿ ಹೆಚ್ಚಾಗಿ ಸಾರ್ವಜನಿಕ ಕಾಮಗಾರಿಗಳಲ್ಲಿ ಭಾಗವಹಿಸಿ, ತಮ್ಮ ಗ್ರಾ. ಪಂ ಅಭಿವೃದ್ಧಿ ಪಡಿಸಿಕೊಳ್ಳಿ. ನರೇಗಾ ಯೋಜನೆಯಿಂದ ಸಿಗುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕಾರ್ಯನಿರ್ವಹಾಧಿಕಾರಿಯವರು ತಿಳಿಸಿದರು.


ಈ ಸಂದರ್ಭ ರೋಜ್ ಗಾರ್ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ ,ತಾಂತ್ರಿಕ ಸಹಾಯಕ ಅಭಿಯಂತರರು ಗೌತಮ್ ಪಿ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ. ಪಂ ಸಿಬ್ಬಂದಿಗಳಾದ ಕೇಶವ, ಗುಣಾಶೀಲ ಬಿ, ರಾಜೇಶ್ವರಿ ಹೆಚ್, ನಿರ್ಮಲ, ಸಂಜೀವಿನಿ ಯಂ.ಬಿ.ಕೆ ಯಶೋಧ, ಎಲ್. ಸಿ. ಆರ್. ಪಿ ಗಾಯತ್ರಿ, ಪಶು ಸಖಿ ದೀಪಿಕಾ, ಕೃಷಿ ಸಖಿ ನವ್ಯ ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ- 2026” ರ ಉದ್ಘಾಟನೆ

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya
error: Content is protected !!