September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

ಕೊಕ್ಕಡ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಮಾನ್ಯ ಕಾರ್ಯನಿರ್ವಹಣಾಧಿಕಾರಿ ವೈಜಣ್ಣನವರು ನರೇಗಾ ಯೋಜನೆ ಕುರಿತು ಚರ್ಚಿಸಿ, ಸಲಹೆ ಸೂಚನೆಗಳನ್ನು ನೀಡಿದರು.

ನರೇಗಾದಲ್ಲಿ ಮಾನವ ದಿನ ಪ್ರಗತಿ ಸಾಧಿಸುವಕ್ಕಾಗಿ ಹೆಚ್ಚಾಗಿ ಸಾರ್ವಜನಿಕ ಕಾಮಗಾರಿಗಳಲ್ಲಿ ಭಾಗವಹಿಸಿ, ತಮ್ಮ ಗ್ರಾ. ಪಂ ಅಭಿವೃದ್ಧಿ ಪಡಿಸಿಕೊಳ್ಳಿ. ನರೇಗಾ ಯೋಜನೆಯಿಂದ ಸಿಗುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕಾರ್ಯನಿರ್ವಹಾಧಿಕಾರಿಯವರು ತಿಳಿಸಿದರು.


ಈ ಸಂದರ್ಭ ರೋಜ್ ಗಾರ್ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ ,ತಾಂತ್ರಿಕ ಸಹಾಯಕ ಅಭಿಯಂತರರು ಗೌತಮ್ ಪಿ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ. ಪಂ ಸಿಬ್ಬಂದಿಗಳಾದ ಕೇಶವ, ಗುಣಾಶೀಲ ಬಿ, ರಾಜೇಶ್ವರಿ ಹೆಚ್, ನಿರ್ಮಲ, ಸಂಜೀವಿನಿ ಯಂ.ಬಿ.ಕೆ ಯಶೋಧ, ಎಲ್. ಸಿ. ಆರ್. ಪಿ ಗಾಯತ್ರಿ, ಪಶು ಸಖಿ ದೀಪಿಕಾ, ಕೃಷಿ ಸಖಿ ನವ್ಯ ಉಪಸ್ಥಿತರಿದ್ದರು.

Related posts

ಮುಂಡಾಜೆ: ನೆಟ್ವರ್ಕ್ ಸಮಸ್ಯೆಗೆ ರಸ್ತೆ ಕಾಮಗಾರಿ ಅಡ್ಡಿ!

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya
error: Content is protected !!